ಬ್ರೇಕಿಂಗ್ ನ್ಯೂಸ್
11-12-23 06:58 pm Mangalore Correspondent ಕ್ರೈಂ
ಉಳ್ಳಾಲ, ಡಿ.11: ಕಳೆದ ವಾರವಷ್ಟೆ ಉಳ್ಳಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದ ಎಸಿಪಿ ನೇತೃತ್ವದ ಆಂಟಿ ಡ್ರಗ್ ತಂಡವು ಮತ್ತೆ ಜಾಲವನ್ನ ಬೆನ್ನಟ್ಟಿದ್ದು ಡ್ರಗ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರನ್ನ ಬಂಧಿಸಿ ಮತ್ತೆ ಆರು ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ವಶಪಡಿಸಿದೆ.
ಕಳೆದ ಡಿ.4 ರಂದು ಉಳ್ಳಾಲದ ಸಂತೋಷನಗರ ಎಂಬಲ್ಲಿ ಕಾರಿನಲ್ಲಿ ನಿಷೇಧಿತ ಸುಮಾರು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್ಗನ್ನ ಅಕ್ರಮವಾಗಿ ಮಾರಾಟ ಮಾಡಲು ಬಂದಿದ್ದ ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಎಂಬವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ಸ್ ತಂಡವು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಮತ್ತು ಮಾರಕಾಯುಧಗಳನ್ನ ವಶಪಡಿಸಿಕೊಂಡಿತ್ತು. ಬಂಧಿತ ಆರೋಪಿಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಆಶಿತ್ ಯಾನೆ ಅಶ್ವಿತ್ ಅಲಿಯಾಸ್ ಆಶು ಎಂಬವರನ್ನು ಬಂಧಿಸಲಾಗಿದೆ. ಕೋಟೆಕಾರು ಗ್ರಾಮದ ಮಾಡೂರು ಸಾಯಿ ಮಂದಿರದ ಸಮೀಪದ ಗ್ರೌಂಡ್ ಬಳಿ ಅವಿತಿದ್ದ ಆಶಿತನ್ನು ಎಸಿಪಿ ನೇತೃತ್ವದ ತಂಡ ಬಂಧಿಸಿದ್ದು, ಆತನಲ್ಲಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ತೂಕದ ಎಂ.ಡಿ.ಎಂ.ಎ, 30,000 ರೂಪಾಯಿ ಮೌಲ್ಯದ 600 ಗ್ರಾಂ ತೂಕದ ಗಾಂಜಾ ಮತ್ತು ಮೋಟಾರ್ ಬೈಕೊಂದನ್ನ ವಶ ಪಡಿಸಿಕೊಳ್ಳಲಾಗಿದೆ.


ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ನಿರ್ದೇಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯ ನಾಯಕ್, ಉಳ್ಳಾಲ ಠಾಣಾ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಹೆಚ್.ಎನ್, ಪಿಎಸ್ಐಗಳಾದ ಶೀತಲ್ ಅಲಗೂರ, ಸಂತೋಷ ಕುಮಾರ್ ಡಿ, ಪಿಎಸ್ಐ ಪುನೀತ್ ಗಾಂವ್ಕರ್, ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ಶಿವಕುಮಾರ್ ಇದ್ದರು.
Ullal drug peddler arrested by ACP team in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm