ಬ್ರೇಕಿಂಗ್ ನ್ಯೂಸ್
12-12-23 04:27 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 12: ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆಯನ್ನು ಶ್ವೇತಾ(31) ಎಂದು ಗುರುತಿಸಲಾಗಿದೆ. ಶ್ವೇತಾ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವ ವೇಳೆ ಮಧ್ಯ ಪ್ರವೇಶಿಸಿದ ಕುಟುಂಬಸ್ಥರು ಇದು ಸಹಜ ಸಾವಲ್ಲ, ಪತಿಯೇ ಶ್ವೇತಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ, ಅಂತ್ಯ ಕ್ರಿಯೆಯನ್ನು ತಡೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ವೇತಾ ಅವರ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆತನೇ ಪಾಯಿಸನ್ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಶ್ವೇತಾ ಹಾಗೂ ದರ್ಶನ್ ಬೆಂಗಳೂರಿನಲ್ಲಿ ನೆಲೆಸಿದ್ದು, ನಾಲ್ಕು ದಿನಗಳ ಹಿಂದೆ ದೇವವೃಂದಕ್ಕೆ ಬಂದಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ನಿಂದ ಶ್ವೇತಾ ಮೃತಪಟ್ಟಿದ್ದಾಳೆಂದು ಪತಿ ದರ್ಶನ್ ಆಕೆಯ ಕುಟುಂಬಕ್ಕೆ ತಿಳಿಸಿದ್ದ.
ದರ್ಶನ್ ಅನೈತಿಕ ಸಂಬಂಧ ಹೊಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾದ ಹಿನ್ನಲೆ ಇಂಜಕ್ಷನ್ ನೀಡಿ ಕೊಲೆ ಮಾಡಿರಬಹುದೆಂದು ಆರೋಪಿಸಿರುವ ಶ್ವೇತಾ ಕುಟುಂಬದವರು ತಾರತುರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದವರನ್ನು ತಡೆದು ಶವ ಪರೀಕ್ಷೆಗೆ ಚಿಕ್ಕಮಗಳೂರು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Woman found dead in suspicious way, murder by husband suspected in Chikmagaluru. The deceased has been identified as Shwetha.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm