ಬ್ರೇಕಿಂಗ್ ನ್ಯೂಸ್
12-12-23 05:33 pm Bangalore Correspondent ಕ್ರೈಂ
ಬೆಂಗಳೂರು, ಡಿ 12: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಾರಲು ಸಂಗ್ರಹಿಸಿಟ್ಟಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ.
ನಗರದ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
2023 ಮುಗಿದು 2024 ಆರಂಭವಾಗಲಿದೆ. ಡಿ. 31ರಂದು ರಾತ್ರಿ ಹೊಸ ವರ್ಷಾಚರಣೆಗೆ ಹಲವೆಡೆ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಕೆಲ ಪಾರ್ಟಿಗಳಿಗೆ ಡ್ರಗ್ಸ್ ಪೂರೈಸಲು ಆರೋಪಿ ಸಜ್ಜಾಗಿದ್ದ' ಎಂದು ಕಮಿಷನರ್ ಬಿ.ದಯಾನಂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
'ಬಂಧಿತ ಆರೋಪಿ, ಪೆಡ್ಲರ್ ಆಗಿದ್ದಾನೆ. ತನ್ನದೇ ತಂಡ ಕಟ್ಟಿಕೊಂಡು ಡ್ರಗ್ಸ್ ಮಾರುತ್ತಿದ್ದ. ಈತನಿಂದ 16 ಕೆ.ಜಿ ಎಂಡಿಎಂಎ, 500 ಗ್ರಾಂ ಕೊಕೇನ್, ಮೂರು ತೂಕದ ಯಂತ್ರ, ಮೊಬೈಲ್ ಜಪ್ತಿ ಮಾಡಲಾಗಿದೆ' ಎಂದರು.
ವಿದೇಶಿ ಪ್ರಜೆಯಾಗಿರುವ ಆರೋಪಿಯು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. 2024ರ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಿಗೆ ನಿಷೇಧಿತ ಡ್ರಗ್ಸ್ ಮತ್ತು ಕೊಕೇನ್ ಅನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದೆಹಲಿ, ಮುಂಬೈ ಹಾಗೂ ಇತರೆ ರಾಜ್ಯಗಳಲ್ಲಿ ನೆಲೆಸಿರುವ ವಿದೇಶಿ ಮೂಲದ ವ್ಯಕ್ತಿಗಳಿಂದ ಚೂಡಿದಾರ್ ಬಟ್ಟೆ, ಬೆಡ್ಶೀಟ್ ಕವರ್ಗಳಲ್ಲಿ, ಸೋಪ್ ಬಾಕ್ಸ್ ಮತ್ತು ಚಾಕೊಲೇಟ್ ಬಾಕ್ಸ್ಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿ ಯಾರಿಗೂ ಅನುಮಾನ ಬರದಂತೆ ಖರೀದಿಸಿಕೊಂಡು ತರುತ್ತಿದ್ದ ಮತ್ತು ಅವುಗಳನ್ನು ತನ್ನ ಮನೆಯಲ್ಲಿರಿಸಿಕೊಂಡಿದ್ದ.
ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರ ತಂಡ ಆರೋಪಿಯನ್ನ ಬಂಧಿಸಿದೆ. ಆರೋಪಿಯು ಹೊಸ ವರ್ಷದ ಆಚರಣೆಯ ಸಮಯದಲ್ಲಿ ಹೆಚ್ಚಿನ ಬೆಲೆಗೆ ಬೆಂಗಳೂರು ನಗರದಲ್ಲಿ ನಡೆಯುವ ಪಾರ್ಟಿಗಳಿಗೆ, ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುವ ಉದ್ದೇಶದಿಂದ ಮಾದಕ ವಸ್ತುಗಳನ್ನು ಸಂಗ್ರಹಿಸಿ ಗೌಪ್ಯವಾಗಿ ಶೇಖರಿಸಿಕೊಂಡಿರುವುದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಯ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸಿಕೊಳ್ಳಲಾಗಿದೆ.
Rs 21 crore was collected for sale on New Year's Eve. Drugs worth Rs 1,000 crore have been seized and a foreign national has been arrested. The CCB police in the city conducted a special operation and arrested the accused.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm