ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm