ಬ್ರೇಕಿಂಗ್ ನ್ಯೂಸ್
14-12-23 08:21 am Mangaluru Correspondent ಕ್ರೈಂ
ಉಳ್ಳಾಲ, ಡಿ.14: ನಡುರಾತ್ರಿ ಶಾಲೆ ಎದುರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದವರನ್ನ ಪ್ರಶ್ನಿಸಿದ ಯುವಕನನ್ನ ಇರಿದು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಜಾಯ್ ಲ್ಯಾಂಡ್ ಶಾಲೆ ಬಳಿ ಬುಧವಾರ ರಾತ್ರಿ ನಡೆದಿದೆ.
ಕೊಲ್ಯ ಸಾರಸ್ವತ ಕಾಲನಿ ಜಾಯ್ ಲ್ಯಾಂಡ್ ಶಾಲಾ ಬಳಿ ನಿವಾಸಿ ವರುಣ್ ಗಟ್ಟಿ(28)ಕೊಲೆಯಾದ ಯುವಕ. ಬುಧವಾರ ರಾತ್ರಿ 10.45ರ ವೇಳೆಗೆ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆಯ ಎದುರುಗಡೆಯ ಕಟ್ಟೆಯೊಂದರಲ್ಲಿ ಕುಳಿತು ಆರೋಪಿ ಸೂರಜ್ ಮತ್ತು ರವಿರಾಜ್ ಎಂಬವರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದಿದ್ದರೆನ್ನಲಾಗಿದೆ. ಈ ವೇಳೆ ತನ್ನ ಮನೆಯಲ್ಲಿದ್ದ ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್ ಶಾಲೆಯ ಮುಂದೆ ಬಿಯರ್ ಬಾಟಲಿ ಯಾಕೆ ಎಸೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.



ಈ ವೇಳೆ ಇತ್ತಂಡಗಳ ನಡುವೆ ವಾಗ್ವಾದ, ತಳ್ಳಾಟ ನಡೆದಿದ್ದು ಸೂರಜ್, ವರುಣ್ ಬೆನ್ನಿಗೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವರುಣ್ ಸಮೀಪದ ತನ್ನ ಮನೆ ಕಡೆ ನಡೆದು ಹೋಗಿದ್ದು ಆತನ ಸಹೋದರ ಶರಣ್ ಮತ್ತು ಸ್ನೇಹಿತರು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ವರುಣ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳದ ರಸ್ತೆಯುದ್ದಕ್ಕೂ ವರಣ್ ರಕ್ತ ಹರಿದಿದೆ.
ಇರಿದು ಕೊಲೆ ಮಾಡಿದ ಸೂರಜ್ ಮತ್ತು ಆತನೊಂದಿಗಿದ್ದ ರವಿರಾಜ್ ಸಾರಸ್ವತ ಕಾಲೊನಿ ನಿವಾಸಿಗಳಾಗಿದ್ದು ಇಬ್ಬರನ್ನೂ ಕ್ಷಿಪ್ರವಾಗಿ ಉಳ್ಳಾಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರವಿರಾಜ್ ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯನಾಗಿದ್ದು ಸೂರಜ್ ಮರಳು ಸಾಗಿಸುವ ಲಾರಿ ಚಾಲಕನಾಗಿದ್ದಾನೆ.
ಮೃತ ವರುಣ್ ಮಂಗಳೂರು ಮೂಡಾದ ಕಮೀಷನರ್ ಅವರ ವಾಹನದ ಚಾಲಕನಾಗಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
28 year old youth murdered at Saraswathi Colony in Ullal, Mangalore for questioning miscrents for throwing beer bottle. The deceased has been identified as Varun Gatti.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm