ಬ್ರೇಕಿಂಗ್ ನ್ಯೂಸ್
17-12-23 06:33 pm HK News Desk ಕ್ರೈಂ
ನವದೆಹಲಿ, ಡಿ 17: 60 ವರ್ಷದ ಮಹಿಳೆಯೊಂದಿಗೆ ಸೆಕ್ಸ್ ಮಾಡಿ, ಆಕೆಯನ್ನೇ ಕೊಂದು ಶವವನ್ನು ಬೆಡ್ರೂಮಿನಲ್ಲಿ ಬಚ್ಚಿಟ್ಟಿದ್ದ 31 ವರ್ಷದ ವ್ಯಕ್ತಿಯನ್ನ ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ
ಆಶಾದೇವಿ ಕೊಲೆಯಾದ ಮಹಿಳೆ, 31 ವರ್ಷದ ದೇವೇಂದ್ರ ಅಲಿಯಾಸ್ ದೇವ್ ಕೊಲೆ ಆರೋಪಿ ಎಂದು ಗುರುತಿಸಲಾಗಿದೆ. 31 ವರ್ಷದ ದೇವೇಂದ್ರ 60 ವರ್ಷದ ಮಹಿಳೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯು ದೇವೇಂದ್ರ ಬೇರೋಬ್ಬಾಕೆ ವಿವಾಹವಾಗುವುದನ್ನು ತಡೆದಿದ್ದಕ್ಕೆ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಡಿಸಿಪಿ ಜಾಯ್ ಟಿರ್ಕಿ ಪ್ರಕಾರ, ಆರೋಪಿಯನ್ನು ಉತ್ತರ ಪ್ರದೇಶದ ಅಲಿಗಢದಲ್ಲಿ ಬಂಧಿಸಲಾಗಿದೆ. ಹತ್ಯೆಯಾದ ಐದು ದಿನಗಳ ನಂತರ ಶುಕ್ರವಾರ ಈಶಾನ್ಯ ದೆಹಲಿಯ ನಂದ ನಗರ ಪ್ರದೇಶದ ಅವರ ಮನೆಯಿಂದ ಆಶಾದೇವಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಆರೋಪಿ ದೇವೇಂದ್ರ 2015ರಲ್ಲಿ ಕೆಲಸ ಹುಡುಕಿಕೊಂಡು ಅಲಿಗಢಕ್ಕೆ ಬಂದು, ತಾಮ್ರದ ತಂತಿ ಪ್ಯಾಕಿಂಗ್ ಮಾಡುವ ಬಿಸಿನೆಸ್ ಆರಂಭಿಸಿದ್ದ. ಕೋವಿಡ್ ಕಾಲದಲ್ಲಿ ನಷ್ಟ ಅನುಭವಿಸಿದ್ದರಿಂದ 2 ವರ್ಷಗಳ ಕಾಲ ಉದ್ಯೋಗವಿಲ್ಲದೇ ಕುಳಿತಿದ್ದ. ಆದ್ರೆ ಜರ್ಮನಿಯಲ್ಲಿ ಓದುತ್ತಿರುವುದಾಗಿ ಹೇಳಿ ಅಲಿಗಢದಲ್ಲಿ ನೆಲೆಸಿರುವ ತಂದೆಯಿಂದ ಹಣ ಪಡೆದಿದ್ದ. ಹಣ ಹೊಂದಿಸಲು ಅವನ ತಂದೆ ತನ್ನ ಭೂಮಿಯನ್ನು ಮಾರಬೇಕಾಯಿತು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಕೊಲೆ ನಡೆದಿದ್ದು ಹೇಗೆ?
ಪೊಲೀಸರ ಪ್ರಕಾರ, 2019ರಲ್ಲಿ ಆರೋಪಿ ದೇವೇಂದ್ರ ನಂದ ನಗರಲ್ಲಿರುವ ಆಶಾದೇವಿ ಎಂಬಾಕೆಯ ಮನೆಯಲ್ಲಿ ಬಾಡಿಗೆಗಾಗಿ ವಾಸಿಸಲು ಪ್ರಾರಂಭಿಸಿದ್ದ. ಕೆಲ ಸಮಯಗಳಲ್ಲೇ ಆಕೆಯೊಂದಿಗೆ ಸ್ನೇಹ ಬೆಳೆಸಿದ್ದ. ಇಬ್ಬರ ನಡುವೆ ದೈಹಿಕ ಸಂಬಂಧವೂ ಬೆಳೆದಿತ್ತು. ಆದ್ರೆ ದೇವೇಂದ್ರ ಆಶಾದೇವಿ ಮನೆಯಲ್ಲಿ ಬಾಡಿಗೆದಾರನಾಗಿ ವಾಸಿಸುತ್ತಿದ್ದ ದೇವೇಂದ್ರ 2 ವರ್ಷಗಳ ಬಳಿಕ ಮತ್ತೊಬ್ಬಳು ಮಹಿಳೆಯನ್ನೂ ಭೇಟಿ ಮಾಡಿದ್ದ. ಆಕೆಯೊಂದಿಗೂ ದೈಹಿಕ ಸಂಪರ್ಕ ಬೆಳೆದಿದ್ದ. ಕೊನೆಗೆ ಇಬ್ಬರು ಮದುವೆಯಾಗಲು ನಿರ್ಧರಿಸಿ ಇದೇ ಡಿಸೆಂಬರ್ 4ರಂದು ಅಲಿಗಢದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.’
ಈ ವಿಷಯ ತಿಳಿದ ಮನೆಯೊಡತಿ ಆಶಾದೇವಿ, ದೇವೇಂದ್ರನನ್ನು ಭೇಟಿಯಾಗಲು ಕರೆದಿದ್ದಳು. ದೇವೇಂದ್ರ ನಿಶ್ಚಿತಾರ್ಥ ಗೆಳತಿಯನ್ನೂ ಮನೆಗೆ ಕರೆದುಕೊಂಡು ಬಂದು ತಾವಿಬ್ಬರು ಮದುವೆಯಾಗುತ್ತಿರುವುದಾಗಿ ಹೇಳಿದ್ದಾನೆ. ಆದ್ರೆ ಆಶಾದೇವಿ ದೇವೇಂದ್ರನನ್ನು ಬೇರೆ ಮದುವೆಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾಳೆ. ಇದಕ್ಕೆ ಅವನು ವಿರೋಧಿಸಿದಾಗ ಆತನಿಗೆ ಕಪಾಳಮೋಕ್ಷ ಮಾಡಿದಾಳೆ. ಇದರಿಂದ ಕೋಪಗೊಂಡ ಆರೋಪಿ ಮಹಿಳೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿದ್ದಾನೆ.
ಮಹಿಳೆ ಪ್ರಜ್ಞಾಹೀನಳಾಗಿದ್ದರೂ ಆರೋಪಿ ಆಕೆಯ ತಲೆಗೆ ಹಲವಾರು ಬಾರಿ ಇಟ್ಟಿಗೆಯಿಂದ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಇದಾದ ಬಳಿಕ ಆಶಾದೇವಿ ಬಳಿಯಿದ್ದ 13 ಸಾವಿರ ಹಣ, ಚಿನ್ನಾಭರಣ ದೋಚಿ ಅಲಿಗಢಕ್ಕೆ ಪರಾರಿಯಾಗಿದ್ದಾರೆ. ಈ ವಿಷಯ ಯಾರಿಗೂ ತಿಳಿದಿರಲಿಲ್ಲ. ಇದೇ ಡಿಸೆಂಬರ್ 5ರಂದು ಆಕೆಯ ಮನೆಯ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದುದ್ದನ್ನು ಗಮನಿಸಿ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬೆಡ್ರೂಮಿನಲ್ಲಿದ್ದ ಬಾಕ್ಸ್ ತೆರೆದು ನೋಡಿದಾಗ ಆಶಾದೇವಿಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A man was arrested on Saturday for allegedly killing his 60-year-old landlady and then stuffing her body in a bed box, police said on Saturday. Devender alias “Dev” (31) had “physical relations” with the victim, Asha Devi, and he told police that she was against him marrying another woman, they said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm