ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm