ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm