ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm