ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.


ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm