ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.


ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm