ಬ್ರೇಕಿಂಗ್ ನ್ಯೂಸ್
21-12-23 03:52 pm Bangalore Correspondent ಕ್ರೈಂ
ಬೆಂಗಳೂರು, ಡಿ 21: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿದ ಪತಿಯ ಎದೆಗೆ ಪತ್ನಿ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಆರೋಪಿ ಪತ್ನಿ ಮನೀಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಮೇಶ್ ದಾಮಿ(27) ಸಾವನ್ನಪ್ಪಿರುವ ವ್ಯಕ್ತಿ. ನೇಪಾಳ ಮೂಲದ ಈ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದರು. ಹುಳಿಮಾವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಪತಿ ಕಾಲೇಜೊಂದರಲ್ಲಿ ಸೆಕ್ಯೂರಿಟಿಯಾಗಿದ್ದರೆ, ಪತ್ನಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇಬ್ಬರು ಅನೋನ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಉಮೇಶ್ ಸ್ನೇಹಿತನೊಂದಿಗೆ ಮದ್ಯದ ಪಾರ್ಟಿಗೆ ಹೋಗಿ ತಡರಾತ್ರಿ 12 ಗಂಟೆಗೆ ಮನೆಗೆ ಬಂದಿದ್ದನು. ಈ ವೇಳೆ, ಪತ್ನಿ ಯಾರೊಂದಿಗೋ ಪೋನ್ ಕಾಲ್ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದಾನೆ. ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತಪಡಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ದಂಪತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
ಇದರಿಂದ ಕೋಪದಲ್ಲಿದ್ದ ಮನಿಷಾ ಮನೆಯಲ್ಲಿದ್ದ ಚಾಕುವಿನಿಂದ ಗಂಡನ ಎದೆಗೆ ಚುಚ್ಚಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡು ಮನಿಷಾಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a shocking incident, a man was stabbed to death by his wife near Pulling Pass College near Hulimavu on suspicion of having an illicit relationship.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm