ಬ್ರೇಕಿಂಗ್ ನ್ಯೂಸ್
22-12-23 09:39 pm Bangalore Correspondent ಕ್ರೈಂ
ಬೆಂಗಳೂರು, ಡಿ 22: ಅಸಹಾಯಕ ವೃದ್ಧೆಗೆ ಸಂಬಂಧಿಸಿದ ಆಸ್ತಿಗಳ ನಕಲಿ ದಾಖಲಾತಿ ಸೃಷ್ಟಿಸಿ ಹಾಗೂ ನಕಲಿ ಬ್ಯಾಂಕ್ ಖಾತೆ ತೆರೆದು 3 ಬ್ಯಾಂಕ್ಗಳಿಂದ 3 ಕೋಟಿ ರೂ.ಗೂ ಅಧಿಕ ಸಾಲ ಪಡೆದು ವಂಚಿಸಿದ್ದ ಐವರನ್ನು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಭಾಸ್ಕರ್, ಮಹೇಶ, ಅಭಿಷೇಕ್ ಗೌಡ, ಡಿ.ಆರ್.ಅರುಣ್, ಟಿ.ಪಿ.ಶಿವಕುಮಾರ್ ಬಂಧಿತರು. ಜೆ.ಪಿ.ನಗರದ ನಿವಾಸಿ ಅಂಬುಜಾಕ್ಷಿ (75) ವಂಚನೆಗೊಳಗಾದವರು.
ಅಂಬುಜಾಕ್ಷಿ ಜೆ.ಪಿ.ನಗರದಲ್ಲಿ 1,350 ಅಡಿ ವಿಸ್ತೀರ್ಣದ ಬಿಡಿಎ ನಿವೇಶನದಲ್ಲಿ ಎರಡು ಅಂತಸ್ತಿನ ಸ್ವಂತ ಡೂಪ್ಲೆಕ್ಸ್ ಮನೆ ಹೊಂದಿದ್ದಾರೆ. ಮಕ್ಕಳು ವಿದೇಶದಲ್ಲಿದ್ದು, ಇವರೂ ಸಹ ವಿದೇಶಕ್ಕೆ ಹೋಗಿ ನೆಲೆಸಲು ಚಿಂತಿಸಿದ್ದರು. ಹೀಗಾಗಿ ತಮ್ಮ ಮನೆ ಮಾರಾಟ ಮಾಡುವ ವಿಚಾರವನ್ನು ರಿಯಲ್ ಎಸ್ಟೇಟ್ ಬ್ರೋಕರ್ಗಳಾಗಿದ್ದ ಆರೋಪಿಗಳಿಗೆ ತಿಳಿಸಿದ್ದರು.

ಇದೇ ನೆಪದಲ್ಲಿ ನಿವೇಶನದ ದಾಖಲೆಗಳನ್ನು ಪಡೆದುಕೊಂಡ ಆರೋಪಿಗಳು, ಅಸಲಿ ದಾಖಲೆಗಳ ರೀತಿಯಲ್ಲೇ ನಿವೇಶನದ 3 ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಂಬುಜಾಕ್ಷಿಯವರ ಸಹಿ ಹೋಲುವ ಪೋರ್ಜರಿ ಸಹಿಗಳನ್ನು ಮಾಡಿದ್ದರು. ನಂತರ ಈ ದಾಖಲೆಗಳನ್ನು 3 ಬ್ಯಾಂಕ್ಗಳಿಗೆ ನೀಡಿ, 3 ಕೋಟಿಗೂ ಅಧಿಕ ಸಾಲ ಪಡೆದುಕೊಂಡು ಪರಾರಿಯಾಗಿದ್ದರು. ಸಾಲದ ವಿಚಾರವಾಗಿ ಬ್ಯಾಂಕ್ ಸಿಬ್ಬಂದಿ ಅಂಬುಜಾಕ್ಷಿ ಅವರನ್ನು ಸಂಪರ್ಕಿಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ. ಡಿ.14ರಂದು ಮಹಿಳೆಯು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಮುಂದಿನ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವರ್ಗಾಯಿಸಿತ್ತು. ಆರೋಪಿಗಳು ಸಾಲ ಪಡೆದಿದ್ದ ಬ್ಯಾಂಕ್ಗಳಿಂದ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿದ ಸಿಸಿಬಿ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
The Economic Offences Wing (EOW) of the CCB has arrested five persons for allegedly creating fake documents of properties belonging to a helpless woman and opening fake bank accounts and taking loans of over Rs 3 crore from three banks. The arrested have been identified as Bhaskar, Mahesh, Abhishek Gowda, D R Arun and T P Shivakumar. The victim has been identified as Ambujakshi (75), a resident of J.P. Nagar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm