ಬ್ರೇಕಿಂಗ್ ನ್ಯೂಸ್
22-12-23 09:39 pm Bangalore Correspondent ಕ್ರೈಂ
ಬೆಂಗಳೂರು, ಡಿ 22: ಅಸಹಾಯಕ ವೃದ್ಧೆಗೆ ಸಂಬಂಧಿಸಿದ ಆಸ್ತಿಗಳ ನಕಲಿ ದಾಖಲಾತಿ ಸೃಷ್ಟಿಸಿ ಹಾಗೂ ನಕಲಿ ಬ್ಯಾಂಕ್ ಖಾತೆ ತೆರೆದು 3 ಬ್ಯಾಂಕ್ಗಳಿಂದ 3 ಕೋಟಿ ರೂ.ಗೂ ಅಧಿಕ ಸಾಲ ಪಡೆದು ವಂಚಿಸಿದ್ದ ಐವರನ್ನು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಭಾಸ್ಕರ್, ಮಹೇಶ, ಅಭಿಷೇಕ್ ಗೌಡ, ಡಿ.ಆರ್.ಅರುಣ್, ಟಿ.ಪಿ.ಶಿವಕುಮಾರ್ ಬಂಧಿತರು. ಜೆ.ಪಿ.ನಗರದ ನಿವಾಸಿ ಅಂಬುಜಾಕ್ಷಿ (75) ವಂಚನೆಗೊಳಗಾದವರು.
ಅಂಬುಜಾಕ್ಷಿ ಜೆ.ಪಿ.ನಗರದಲ್ಲಿ 1,350 ಅಡಿ ವಿಸ್ತೀರ್ಣದ ಬಿಡಿಎ ನಿವೇಶನದಲ್ಲಿ ಎರಡು ಅಂತಸ್ತಿನ ಸ್ವಂತ ಡೂಪ್ಲೆಕ್ಸ್ ಮನೆ ಹೊಂದಿದ್ದಾರೆ. ಮಕ್ಕಳು ವಿದೇಶದಲ್ಲಿದ್ದು, ಇವರೂ ಸಹ ವಿದೇಶಕ್ಕೆ ಹೋಗಿ ನೆಲೆಸಲು ಚಿಂತಿಸಿದ್ದರು. ಹೀಗಾಗಿ ತಮ್ಮ ಮನೆ ಮಾರಾಟ ಮಾಡುವ ವಿಚಾರವನ್ನು ರಿಯಲ್ ಎಸ್ಟೇಟ್ ಬ್ರೋಕರ್ಗಳಾಗಿದ್ದ ಆರೋಪಿಗಳಿಗೆ ತಿಳಿಸಿದ್ದರು.
ಇದೇ ನೆಪದಲ್ಲಿ ನಿವೇಶನದ ದಾಖಲೆಗಳನ್ನು ಪಡೆದುಕೊಂಡ ಆರೋಪಿಗಳು, ಅಸಲಿ ದಾಖಲೆಗಳ ರೀತಿಯಲ್ಲೇ ನಿವೇಶನದ 3 ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಂಬುಜಾಕ್ಷಿಯವರ ಸಹಿ ಹೋಲುವ ಪೋರ್ಜರಿ ಸಹಿಗಳನ್ನು ಮಾಡಿದ್ದರು. ನಂತರ ಈ ದಾಖಲೆಗಳನ್ನು 3 ಬ್ಯಾಂಕ್ಗಳಿಗೆ ನೀಡಿ, 3 ಕೋಟಿಗೂ ಅಧಿಕ ಸಾಲ ಪಡೆದುಕೊಂಡು ಪರಾರಿಯಾಗಿದ್ದರು. ಸಾಲದ ವಿಚಾರವಾಗಿ ಬ್ಯಾಂಕ್ ಸಿಬ್ಬಂದಿ ಅಂಬುಜಾಕ್ಷಿ ಅವರನ್ನು ಸಂಪರ್ಕಿಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ. ಡಿ.14ರಂದು ಮಹಿಳೆಯು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಮುಂದಿನ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವರ್ಗಾಯಿಸಿತ್ತು. ಆರೋಪಿಗಳು ಸಾಲ ಪಡೆದಿದ್ದ ಬ್ಯಾಂಕ್ಗಳಿಂದ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿದ ಸಿಸಿಬಿ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
The Economic Offences Wing (EOW) of the CCB has arrested five persons for allegedly creating fake documents of properties belonging to a helpless woman and opening fake bank accounts and taking loans of over Rs 3 crore from three banks. The arrested have been identified as Bhaskar, Mahesh, Abhishek Gowda, D R Arun and T P Shivakumar. The victim has been identified as Ambujakshi (75), a resident of J.P. Nagar.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm