ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm