ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm