ಬ್ರೇಕಿಂಗ್ ನ್ಯೂಸ್
19-11-20 11:36 am Headline Karnataka News Network ಕ್ರೈಂ
ಮಂಡ್ಯ, ನವೆಂಬರ್ 19: ಯುವತಿಯ ಅಂಗಾಂಗಗಳನ್ನು ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆಯಲ್ಲಿ ನಡೆದಿದೆ. ಇಲ್ಲಿನ ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆಯಾಗಿವೆ.
ಬಂಡಿಹೊಳೆ ಗ್ರಾಮದ ಹೇಮಾವತಿ ದಡದಲ್ಲಿರುವ ವಿದ್ಯುತ್ ಸ್ಥಾವರ ಘಟಕದ ಸಮೀಪ ತಲೆ ಮತ್ತು ಅಂಗಾಂಗಗಳು ಪತ್ತೆಯಾಗಿವೆ. ಸ್ಥಳೀಯರು ಮೊದಲು ಯುವತಿಯ ದೇಹದ ಅಂಗಾಂಗಗಳು ತೇಲುತ್ತಿದ್ದುದನ್ನು ನೋಡಿದ್ದಾರೆ. ನಂತರ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
25 ರಿಂದ 30 ವರ್ಷದ ಅಪರಿಚಿತ ಯುವತಿಯನ್ನು ತುಂಡುತುಂಡಾಗಿ ಕತ್ತರಿಸಿ ಕೊಲೆ ಮಾಡಿರುವ ದುಷ್ಕರ್ಮಿಗಳು, ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿಕೊಂಡು ವಾಹನದಲ್ಲಿ ಬಂದು ಇಲ್ಲಿ ಬಿಸಾಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಯುವತಿ ಯಾರೆಂದು ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಸೆರೆಗೆ ತನಿಖೆ ಕೈಗೊಂಡಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ತಲೆ ಹಾಗೂ ದೇಹದ ಭಾಗವನ್ನು ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಪೊಲೀಸರು ಸಾಗಿಸಿದ್ದು, ಯುವತಿಯ ಮೂಗಿನಲ್ಲಿ ಕೆಂಪು ಹರಳಿನ ಮೂಗುತಿ, ಬಲಗೈನ ಮುಂಗೈನ ಮೇಲೆ ಮೀನಿನ ಹಚ್ಚೆಯ ಗುರುತು ಇದೆ. ಈಕೆಯ ವಾರಸುದಾರರು ಯಾರಾದರೂ ಇದ್ದಲ್ಲಿ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸರನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
A young girl has been brutally murdered and her body has been cut in pieces and throw to river Hemavathi in Mandya.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm