ಬ್ರೇಕಿಂಗ್ ನ್ಯೂಸ್
19-11-20 11:36 am Headline Karnataka News Network ಕ್ರೈಂ
ಮಂಡ್ಯ, ನವೆಂಬರ್ 19: ಯುವತಿಯ ಅಂಗಾಂಗಗಳನ್ನು ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆಯಲ್ಲಿ ನಡೆದಿದೆ. ಇಲ್ಲಿನ ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆಯಾಗಿವೆ.
ಬಂಡಿಹೊಳೆ ಗ್ರಾಮದ ಹೇಮಾವತಿ ದಡದಲ್ಲಿರುವ ವಿದ್ಯುತ್ ಸ್ಥಾವರ ಘಟಕದ ಸಮೀಪ ತಲೆ ಮತ್ತು ಅಂಗಾಂಗಗಳು ಪತ್ತೆಯಾಗಿವೆ. ಸ್ಥಳೀಯರು ಮೊದಲು ಯುವತಿಯ ದೇಹದ ಅಂಗಾಂಗಗಳು ತೇಲುತ್ತಿದ್ದುದನ್ನು ನೋಡಿದ್ದಾರೆ. ನಂತರ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
25 ರಿಂದ 30 ವರ್ಷದ ಅಪರಿಚಿತ ಯುವತಿಯನ್ನು ತುಂಡುತುಂಡಾಗಿ ಕತ್ತರಿಸಿ ಕೊಲೆ ಮಾಡಿರುವ ದುಷ್ಕರ್ಮಿಗಳು, ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿಕೊಂಡು ವಾಹನದಲ್ಲಿ ಬಂದು ಇಲ್ಲಿ ಬಿಸಾಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಯುವತಿ ಯಾರೆಂದು ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಸೆರೆಗೆ ತನಿಖೆ ಕೈಗೊಂಡಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ತಲೆ ಹಾಗೂ ದೇಹದ ಭಾಗವನ್ನು ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಪೇಟೆಯ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಪೊಲೀಸರು ಸಾಗಿಸಿದ್ದು, ಯುವತಿಯ ಮೂಗಿನಲ್ಲಿ ಕೆಂಪು ಹರಳಿನ ಮೂಗುತಿ, ಬಲಗೈನ ಮುಂಗೈನ ಮೇಲೆ ಮೀನಿನ ಹಚ್ಚೆಯ ಗುರುತು ಇದೆ. ಈಕೆಯ ವಾರಸುದಾರರು ಯಾರಾದರೂ ಇದ್ದಲ್ಲಿ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸರನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
A young girl has been brutally murdered and her body has been cut in pieces and throw to river Hemavathi in Mandya.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am