ಬ್ರೇಕಿಂಗ್ ನ್ಯೂಸ್
02-01-24 02:21 pm HK News Desk ಕ್ರೈಂ
ಕುಣಿಗಲ್, ಜ 02: ರಸ್ತೆ ಅಪಘಾತ ಸಂಬಂಧ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಸಂಬಂಧಿಗಳ ಮತ್ತು ಬಿದನಗೆರೆ ಗ್ರಾಮಸ್ಥರ ನಡುವೆ ಜಟಾಪಟಿ ನಡೆದು ಜಿಲ್ಲಾ ಎಸ್ಪಿ ಅವರ ತಾಯಿ ಮೇಲೆ ಹಲ್ಲೆ ನಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿದನಗೆರೆ ಬೈಪಾಸ್ನಲ್ಲಿ ನಡೆದಿದೆ.
ಘಟನೆಯಲ್ಲಿ ಹಾಸನ ಜಿಲ್ಲಾ ಎಸ್ಪಿ ಮೊಹಮ್ಮದ್ ಸುಜಿತಾ ಅವರ ತಾಯಿ ಎ.ಜೆ.ಮಹಮದ್ ಅಜೀಜಾ (60) ಹಲ್ಲೆಗೆ ಒಳಗಾದ ಮಹಿಳೆಯಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಘಟನೆ ಸಂಬಂಧ ಬಿದನಗೆರೆ ಗ್ರಾಮದ ಮೂರು ಮಂದಿ ವಿರುದ್ದ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ. 1 ಸೋಮವಾರದಂದು ಮಧ್ಯಾಹ್ನ ಎ.ಜೆ.ಮಹಮದ್ ಅಜೀಜಾ ಹಾಗೂ ಅವರ ಸಂಬಂಧಿಕರು ಹಾಸನದಿಂದ ಕುಣಿಗಲ್ ಮಾರ್ಗವಾಗಿ ಎರ್ಟಿಗಾ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿರಬೇಕಾದರೆ, ಬಿದನಗೆರೆ ಬೈಪಾಸ್ ನಲ್ಲಿ ಯಾವುದೋ ಒಂದು ವಾಹನ ವ್ಯಕ್ತಿಯೋರ್ವನಿಗೆ ಅಪಘಾತ ಮಾಡಿ ಪರಾರಿಯಾಗಿತ್ತು, ತಕ್ಷಣ ನಾವು ಕಾರು ನಿಲ್ಲಿಸಿ ಅಪಘಾತವಾದ ವ್ಯಕ್ತಿಗೆ ಅಸ್ಪತ್ರೆಗೆ ಸೇರಿಸಬೇಕೆಂದು ಪರಿಶೀಲಿಸಲು ನಾವು ಪ್ರಯತ್ನಿಸಿದ್ದಾಗ 10 ಜನರ ಗುಂಪೊಂದು ನಮ್ಮನು ಸುತ್ತುವರೆದು, ನಮ್ಮೊಂದಿಗೆ ಜಗಳವಾಡಲು ಪ್ರಾರಂಭಿಸಿದರು, ಆ ವ್ಯಕ್ತಿಯನ್ನು ಪರೀಕ್ಷಿಸಲು ಅವರು ಅವಕಾಶ ಕೊಡಲಿಲ್ಲ, ಬದಲಾಗಿ ಅವರು ನಮ್ಮನು ನಿಂದಿಸಿ, ಹಣಕ್ಕೆ ಬೇಡಿಕೆ ಇಟ್ಟರು, ಆ ಗುಂಪಿನಲ್ಲಿ ಇದ್ದ ಕೆಲವರು ನಮಗೆ ಹಣ ನೀಡುವಂತೆ ಬೆದರಿಕೆ ಹಾಕಿದರು, ಕೈಯಲ್ಲಿ ಛತ್ರಿ ಹಿಡಿದಿದ್ದ ವ್ಯಕ್ತಿಯೋರ್ವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ.

ನನ್ನ ರಕ್ಷಣೆಗೆ ಬಂದ ನನ್ನ ಸಹೋದರ ಎ.ಜೆ.ಹಸನ್ ಅಲಿ ಶೇಕ್ ಗೂ ಹೊಡೆದರು, ನನ್ನ ಅಣ್ಣನ ಬೆನ್ನಿಗೆ ತೀವ್ರ ಹೊಡೆತ ಬಿದ್ದಿದೆ. ನಂತರ ಏಕಾಏಕಿ ಎರಡು ಮೂರು ಮಂದಿ ಕೂಡ ನನ್ನ ಮೇಲೆ ಹಲ್ಲೆ ನಡೆಸಿದರು, ಗುಂಪಿನಲ್ಲಿ ಇದ್ದ ಮಹಿಳೆಯೋರ್ವಳು ತನ್ನ ಕೈಯಲ್ಲಿ ಚಾಕು ತೆಗೆದುಕೊಂಡು ನನ್ನ ಗಂಟಲ ಬಳಿ ಇಟ್ಟು ಹಣ ನೀಡುವಂತೆ ಒತ್ತಾಯಿಸಿದರು, ಇಲ್ಲದಿದ್ದರೆ ನಮ್ಮನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಮತ್ತೊಬ್ಬ ವ್ಯಕ್ತಿ ನನ್ನ ತಲೆ ಹಿಂಭಾಗಕ್ಕೆ ಹೊಡೆದಿದ್ದು, ತಕ್ಷಣ ನಾನು ಪ್ರಜ್ಞೆ ತಪ್ಪಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ಎ.ಜೆ.ಮಹಮದ್ ಅಜೀಜಾ ಆರೋಪಿಸಿದ್ದಾರೆ.
The incident took place at Bidanagere bypass on National Highway 75 after a scuffle broke out between the relatives of Hassan District Superintendent of Police and bidanagere villagers over a road accident.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm