ಬ್ರೇಕಿಂಗ್ ನ್ಯೂಸ್
02-01-24 02:21 pm HK News Desk ಕ್ರೈಂ
ಕುಣಿಗಲ್, ಜ 02: ರಸ್ತೆ ಅಪಘಾತ ಸಂಬಂಧ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಸಂಬಂಧಿಗಳ ಮತ್ತು ಬಿದನಗೆರೆ ಗ್ರಾಮಸ್ಥರ ನಡುವೆ ಜಟಾಪಟಿ ನಡೆದು ಜಿಲ್ಲಾ ಎಸ್ಪಿ ಅವರ ತಾಯಿ ಮೇಲೆ ಹಲ್ಲೆ ನಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿದನಗೆರೆ ಬೈಪಾಸ್ನಲ್ಲಿ ನಡೆದಿದೆ.
ಘಟನೆಯಲ್ಲಿ ಹಾಸನ ಜಿಲ್ಲಾ ಎಸ್ಪಿ ಮೊಹಮ್ಮದ್ ಸುಜಿತಾ ಅವರ ತಾಯಿ ಎ.ಜೆ.ಮಹಮದ್ ಅಜೀಜಾ (60) ಹಲ್ಲೆಗೆ ಒಳಗಾದ ಮಹಿಳೆಯಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಘಟನೆ ಸಂಬಂಧ ಬಿದನಗೆರೆ ಗ್ರಾಮದ ಮೂರು ಮಂದಿ ವಿರುದ್ದ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ. 1 ಸೋಮವಾರದಂದು ಮಧ್ಯಾಹ್ನ ಎ.ಜೆ.ಮಹಮದ್ ಅಜೀಜಾ ಹಾಗೂ ಅವರ ಸಂಬಂಧಿಕರು ಹಾಸನದಿಂದ ಕುಣಿಗಲ್ ಮಾರ್ಗವಾಗಿ ಎರ್ಟಿಗಾ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿರಬೇಕಾದರೆ, ಬಿದನಗೆರೆ ಬೈಪಾಸ್ ನಲ್ಲಿ ಯಾವುದೋ ಒಂದು ವಾಹನ ವ್ಯಕ್ತಿಯೋರ್ವನಿಗೆ ಅಪಘಾತ ಮಾಡಿ ಪರಾರಿಯಾಗಿತ್ತು, ತಕ್ಷಣ ನಾವು ಕಾರು ನಿಲ್ಲಿಸಿ ಅಪಘಾತವಾದ ವ್ಯಕ್ತಿಗೆ ಅಸ್ಪತ್ರೆಗೆ ಸೇರಿಸಬೇಕೆಂದು ಪರಿಶೀಲಿಸಲು ನಾವು ಪ್ರಯತ್ನಿಸಿದ್ದಾಗ 10 ಜನರ ಗುಂಪೊಂದು ನಮ್ಮನು ಸುತ್ತುವರೆದು, ನಮ್ಮೊಂದಿಗೆ ಜಗಳವಾಡಲು ಪ್ರಾರಂಭಿಸಿದರು, ಆ ವ್ಯಕ್ತಿಯನ್ನು ಪರೀಕ್ಷಿಸಲು ಅವರು ಅವಕಾಶ ಕೊಡಲಿಲ್ಲ, ಬದಲಾಗಿ ಅವರು ನಮ್ಮನು ನಿಂದಿಸಿ, ಹಣಕ್ಕೆ ಬೇಡಿಕೆ ಇಟ್ಟರು, ಆ ಗುಂಪಿನಲ್ಲಿ ಇದ್ದ ಕೆಲವರು ನಮಗೆ ಹಣ ನೀಡುವಂತೆ ಬೆದರಿಕೆ ಹಾಕಿದರು, ಕೈಯಲ್ಲಿ ಛತ್ರಿ ಹಿಡಿದಿದ್ದ ವ್ಯಕ್ತಿಯೋರ್ವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ.

ನನ್ನ ರಕ್ಷಣೆಗೆ ಬಂದ ನನ್ನ ಸಹೋದರ ಎ.ಜೆ.ಹಸನ್ ಅಲಿ ಶೇಕ್ ಗೂ ಹೊಡೆದರು, ನನ್ನ ಅಣ್ಣನ ಬೆನ್ನಿಗೆ ತೀವ್ರ ಹೊಡೆತ ಬಿದ್ದಿದೆ. ನಂತರ ಏಕಾಏಕಿ ಎರಡು ಮೂರು ಮಂದಿ ಕೂಡ ನನ್ನ ಮೇಲೆ ಹಲ್ಲೆ ನಡೆಸಿದರು, ಗುಂಪಿನಲ್ಲಿ ಇದ್ದ ಮಹಿಳೆಯೋರ್ವಳು ತನ್ನ ಕೈಯಲ್ಲಿ ಚಾಕು ತೆಗೆದುಕೊಂಡು ನನ್ನ ಗಂಟಲ ಬಳಿ ಇಟ್ಟು ಹಣ ನೀಡುವಂತೆ ಒತ್ತಾಯಿಸಿದರು, ಇಲ್ಲದಿದ್ದರೆ ನಮ್ಮನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಮತ್ತೊಬ್ಬ ವ್ಯಕ್ತಿ ನನ್ನ ತಲೆ ಹಿಂಭಾಗಕ್ಕೆ ಹೊಡೆದಿದ್ದು, ತಕ್ಷಣ ನಾನು ಪ್ರಜ್ಞೆ ತಪ್ಪಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ಎ.ಜೆ.ಮಹಮದ್ ಅಜೀಜಾ ಆರೋಪಿಸಿದ್ದಾರೆ.
The incident took place at Bidanagere bypass on National Highway 75 after a scuffle broke out between the relatives of Hassan District Superintendent of Police and bidanagere villagers over a road accident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm