ಬ್ರೇಕಿಂಗ್ ನ್ಯೂಸ್
04-01-24 10:11 pm Mangalore Correspondent ಕ್ರೈಂ
ಮಂಗಳೂರು, ಜ.4: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಹಣ ಡಬಲ್ ಆಗುವ ಆಸೆಯಿಂದ IIFL Securities ಹೆಸರಿನಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದು, ಸುಮಾರು 40.64 ಲಕ್ಷ ರೂಪಾಯಿ ಕಳಕೊಂಡಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಯಾರೋ ಅಪರಿಚಿತ ವ್ಯಕ್ತಿ ವಾಟ್ಸಪ್ ಕರೆ ಮಾಡಿ, IIFL Securities ಹೆಸರಿನಲ್ಲಿ ಸ್ಟಾಕ್ ಗ್ರೂಪ್ ಆರಂಭವಾಗುತ್ತಿದ್ದು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದರು. ಜಾಯಿನ್ ಲಿಂಕ್ ಮೂಲಕ Blackrock stocks pullup group ಎಂಬ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದಾರೆ. ಸದ್ರಿ ಗ್ರೂಪಿನಲ್ಲಿ ಏಪ್ ಒಂದರ ಲಿಂಕ್ ಕಳುಹಿಸಿದ್ದು, ಅದನ್ನು ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿತ್ತು.

IIFL Securities ಎಂಬ ಹೆಸರಿನ ಏಪ್ ಡೌನ್ಲೋಡ್ ಮಾಡಿಕೊಂಡಿದ್ದು, ಅದರಲ್ಲಿ ಬೇರೆ ಬೇರೆ ಸ್ಟಾಕ್ಸ್ ಗಳನ್ನು ಖರೀದಿಸಿದಲ್ಲಿ ಮರುದಿನ ಹೂಡಿಕೆ ಮಾಡಿದ ಹಣದೊಂದಿಗೆ 5 ಶೇ. ಲಾಭಾಂಶ ನೀಡುವುದಾಗಿ ತಿಳಿಸಲಾಗಿತ್ತು. ಎಂಬಿಬಿಎಸ್ ವಿದ್ಯಾರ್ಥಿಯು ನ.11ರಿಂದ ಡಿ.22ರ ನಡುವೆ ತನ್ನ ಎಸ್ ಬಿಐ ಬ್ಯಾಂಕ್ ಖಾತೆಯಿಂದ 23.39 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದರು. ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಮತ್ತಷ್ಟು ಹಣ ದೊರೆಯುತ್ತೆ ಎನ್ನುವ ಆಸೆಯಿಂದ ತನ್ನ ಗೆಳೆಯ ಫೈಜಲ್ ಖಾಜ್ಮಿ ಎಂಬವರ ಕೆನರಾ ಬ್ಯಾಂಕಿನ ಖಾತೆಯಿಂದ ಮತ್ತೆ 17.24 ಲಕ್ಷ ರೂ. ಹಣವನ್ನು ಏಪ್ ನಲ್ಲಿ ಹೂಡಿಕೆ ಮಾಡಿದ್ದರು.
ಮೊದಲಿಗೆ ಹೂಡಿಕೆ ಮಾಡಿದ್ದ ಹಣ ಮತ್ತು ಲಾಭಾಂಶವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಳ್ಳಲು ಏಪ್ ನಲ್ಲಿ ಅವಕಾಶ ನೀಡಲಾಗಿತ್ತು. ಅದರಂತೆ, ಹಣ ತೆಗೆಯಲು ಮುಂದಾಗಿದ್ದ ವೇಳೆ ಅದು ಸಾಧ್ಯವಾಗಲಿಲ್ಲ. ಬಳಿಕ ವಾಟ್ಸಪ್ ಅಡ್ಮಿನ್ ಅವರಲ್ಲಿ ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಮತ್ತಷ್ಟು ಕರೆ ಮಾಡಿದಾಗ, ಇವರನ್ನು ಬ್ಲಾಕ್ ಮಾಡಿದ್ದರು. ಆಮೂಲಕ IIFL Securities ಹೆಸರಿನಲ್ಲಿ ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡುವ ನೆಪದಲ್ಲಿ ಒಟ್ಟು 40,64,600 ರೂ. ಹಣವನ್ನು ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡ ವ್ಯಕ್ತಿ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mbbs student in Mangalore Cheated of Rs 40 lakhs in IIFL Securities. A case has been registered at the cyber police.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm