ಬ್ರೇಕಿಂಗ್ ನ್ಯೂಸ್
20-11-20 10:30 am Mangalore Correspondent ಕ್ರೈಂ
ಮಂಗಳೂರು, ನ.20 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಕುತ್ತಿಗೆಯಿಂದ 2.34 ಲಕ್ಷ ರೂ. ಮೌಲ್ಯದ ಚಿನ್ನದ ಸರ ಎಗರಿಸಿದ ಘಟನೆ ನಡೆದಿದ್ದು, ಕಾವೂರು ಹಾಗು ಕದ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ರಶ್ಮಿ ಎಂಬವರು ಕೆಲಸ ಮುಗಿಸಿ ಪಂಜಿಮೊಗರಿನ ಉರುಂದಾಡಿಗುಡ್ಡೆಯಲ್ಲಿರುವ ಮನೆ ಕಡೆಗೆ ಹೋಗುತ್ತಿದ್ದಾಗ ರಾಘವೇಂದ್ರ ಮಠದ ಹತ್ತಿರ ಅಪರಿಚಿತನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ ಎನ್ನಲಾಗಿದೆ.
ಭಯಗೊಂಡು ರಶ್ಮಿ ತನ್ನ ತಾಯಿಗೆ ಕರೆ ಮಾಡಿದ್ದು, ಅಷ್ಟರಲ್ಲಿ ಆ ವ್ಯಕ್ತಿಯು ಹಿಂದುಗಡೆಯಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದಿದ್ದಾನೆ. ಚಿನ್ನದ ಕರಿಮಣಿ ಸರವು ಸುಮಾರು 22 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ 80,000 ರೂ. ಆಗಿರಬಹುದು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೀತಾ ಎಂಬವರು ಕದ್ರಿಯಲ್ಲಿರುವ ಸಂಬಂಧಿಕರ ಮನೆಯಿಂದ ಬುಧವಾರ ಸಂಜೆ ತನ್ನ ಮನೆಗೆ ವ್ಯಾಸನಗರದಲ್ಲಿರುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬೈಕ್ ನಿಲ್ಲಿಸಿ ರಿಪೇರಿ ಮಾಡುವಂತೆ ನಟಿಸುತ್ತಿದ್ದ. ಆತನನ್ನು ದಾಟಿ ಮುಂದೆ ಹೋದ ನಂತರ ಆತನು ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಸುಮಾರು 54,000 ರೂ. ಮೌಲ್ಯದ 13 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಮತ್ತು ಸುಮಾರು 1 ಲಕ್ಷ ರೂ. ಮೌಲ್ಯದ 26 ಗ್ರಾಂ ತೂಕದ ಸರ ಸಹಿತ 1,54,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಿತ್ತುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two women have reported chain snatching case of about 2.34 lakhs Kadri police station in Mangalore.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am