ಬ್ರೇಕಿಂಗ್ ನ್ಯೂಸ್
08-01-24 07:44 pm Mangalore Correspondent ಕ್ರೈಂ
ಮಂಗಳೂರು, ಜ.8: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಪ್ರಕರಣದಲ್ಲಿ ಸ್ವತಃ ಮೂಡಾ ಕಮಿಷನರ್ ಮನ್ಸೂರ್ ಆಲಿ ಉರ್ವಾ ಠಾಣೆಗೆ ಹಾಜರಾಗಿ ಇನ್ಸ್ ಪೆಕ್ಟರ್ ಭಾರತಿ ಮುಂದೆ ತನ್ನ ಹೇಳಿಕೆಯನ್ನು ನೀಡಿದ್ದಾರೆ.
ಪೊಲೀಸ್ ಠಾಣೆಗೆ ಹಾಜರಾದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಮನ್ಸೂರ್ ಆಲಿ, ಡಿ.27ರಂದು ಮೂಡಾ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯ ಕುರಿತ ನಡಾವಳಿ ಬಗ್ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನಡೆಸುತ್ತಿರುವ ಮಹಿಳೆಗೆ ಸೂಚಿಸಿದ್ದೆ. ನೂರು ಪುಟಗಳಿಗೂ ಹೆಚ್ಚು ಇದ್ದ ವರದಿಯನ್ನು ತಪ್ಪು ತಪ್ಪಾಗಿ ಮಾಡಿಕೊಟ್ಟಿದ್ದರು. ತಪ್ಪಾಗಿ ವರದಿ ಕೊಟ್ಟ ಬಗ್ಗೆ ಅಷ್ಟು ಉದ್ದ ವರದಿ ಬರೆಯಲು ತನ್ನಿಂದ ಸಾಧ್ಯವಿಲ್ಲ ಎಂದಿದ್ದರು. ಸರಿಯಾಗಿ ಕೆಲಸ ಮಾಡೋದಿದ್ದರೆ ಇಲ್ಲಿರಿ, ಇಲ್ಲಾಂದ್ರೆ ಬೇರೆಯವರು ಕೆಲಸ ಮಾಡುತ್ತಾರೆ ಎಂದು ಹೇಳಿದ್ದೆ.
ಮರುದಿನ ಅವರ ಬದಲು ಬೇರೆ ಸಿಬಂದಿಯನ್ನು ಕೆಲಸಕ್ಕೆ ನೇಮಿಸುವಂತೆ ಗುತ್ತಿಗೆ ಏಜನ್ಸಿಗೆ ತಿಳಿಸಿದ್ದೆ. ಆದರೆ ಅದೇ ನೆಪದಲ್ಲಿ ತನ್ನನ್ನು ಕೆಲಸದಿಂದ ತೆಗೆದು ಹಾಕುತ್ತಾರೆಂಬ ಭಯ ಮತ್ತು ನನ್ನ ಮೇಲಿನ ಹಗೆತನದಲ್ಲಿ ಈ ರೀತಿ ದೂರು ಕೊಟ್ಟಿದ್ದಾರೆ. ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದೇನೆ. ಆ ಮಹಿಳೆ ಕೂಡ ಈ ರೀತಿ ಮಾಡಬಾರದಿತ್ತು, ತನ್ನಿಂದ ತಪ್ಪಾಗಿದೆ ಎಂದಿದ್ದಾರೆ. ಈಗ ಕಚೇರಿಗೆ ಬರುತ್ತಿದ್ದಾರೆ. ತನಿಖಾಧಿಕಾರಿ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಸುಳ್ಳು ದೂರು ನೀಡಿರುವ ಬಗ್ಗೆ ಮಹಿಳೆ ವಿರುದ್ಧ ಕ್ರಮ ಕೈಗೊಳ್ತೀರಾ ಎಂದು ಕೇಳಿದ ಬಗ್ಗೆ ಈ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ. ಏನು ಕ್ರಮ ಆಗಬೇಕೋ ಅವರು ಮಾಡಲಿದ್ದಾರೆ. ವಿಚಾರಣೆ ಹಂತದಲ್ಲಿರುವಾಗ ಈ ಬಗ್ಗೆ ಹೆಚ್ಚೇನು ಹೇಳಲು ಹೋಗುವುದಿಲ್ಲ ಎಂದಿದ್ದಾರೆ. ಮಹಿಳೆ ತನ್ನನ್ನು ಸಂಜೆ ಹೊತ್ತು ಚೇಂಬರಿಗೆ ಕರೆದು ಮೈ ಕೈ ಮುಟ್ಟಿ ಕಿರುಕುಳ ನೀಡುತ್ತಿದ್ದಾರೆ, ರಾತ್ರಿ ವರೆಗೂ ಕೆಲಸಕ್ಕಾಗಿ ನಿಲ್ಲಿಸುತ್ತಾರೆ, ಆಮೂಲಕ ಲೈಂಗಿಕ ಮತ್ತು ಮಾನಸಿಕ ಕಿರುಕುಳ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.
Mangalore Muda Commissioner Mansoor Ali alleged of sexual harrasment, says its revenge plan. Work pressure revenge has been turned into sexual harrasment which is wrong said Mansoor Ali speaking to media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm