ಬ್ರೇಕಿಂಗ್ ನ್ಯೂಸ್
09-01-24 01:38 pm Bangalore Correspondent ಕ್ರೈಂ
ಬೆಂಗಳೂರು, ಜ.9: ಗೋವಾದ ಹೋಟೆಲ್ ಒಂದರಲ್ಲಿ ಮಗುವಿನ ಹತ್ಯೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಉದ್ಯಮಿ, ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಗೋವಾಗೆ ತೆರಳಿದ್ದಾಗ ಹೋಟೆಲ್ನಲ್ಲಿ ತಂಗಿದ್ದ ಸುಚನಾ ಸೇಠ್ ಕೊಠಡಿಯಲ್ಲಿ ತನ್ನ ಮಗನ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ ಅಪ್ ಮೈಂಡ್ಫುಲ್ (ಎಐ) ಲ್ಯಾಬ್ ಎಂಬ ಸಂಸ್ಥೆಯ ಸಿಇಓ ಆಗಿರುವ ಸುಚನಾ ಸೇಠ್ ಸೋಮವಾರ ರಾತ್ರಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋವಾದಿಂದ ಬೆಂಗಳೂರಿಗೆ ಟ್ಯಾಕ್ಸಿ ಮಾಡಿಕೊಂಡು ಬಂದಿದ್ದ ಆರೋಪಿಯನ್ನು ಗೋವಾ ಪೊಲೀಸರ ಸೂಚನೆ ಮೇರೆಗೆ ಐಮಂಗಲದಲ್ಲಿ ಬಂಧಿಸಲಾಗಿದೆ.

ಹೋಟೆಲ್ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದರು. ಈ ವೇಳೆ ಅನುಮಾನಗೊಂಡ ಹೋಟೆಲ್ನವರು ರೂಮ್ ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ, ಪೊಲೀಸರು ಟ್ಯಾಕ್ಸಿ ಡ್ರೈವರ್ ಸಂಪರ್ಕ ಮಾಡಿ, ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಇದರಂತೆ, ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಪೊಲೀಸ್ ಠಾಣೆ ಬಳಿ ಟ್ಯಾಕ್ಸಿ ಚಾಲಕ ಕಾರು ನಿಲ್ಲಿಸಿದ್ದು ಪೊಲೀಸರು ಆರೋಪಿ ಸುಚನಾ ಸೇಠ್ ರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ, ಕಾರಿನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಸುಚನಾ ಸೇಠ್ ಪತಿ ವೆಂಕಟ ರಾಮನ್ ಚಿತ್ರದುರ್ಗಕ್ಕೆ ಆಗಮಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸುಚನಾ ಸೇಠಳನ್ನು ಹೆಚ್ಚಿನ ತನಿಖೆಗಾಗಿ ಗೋವಾಕ್ಕೆ ಕರೆದೊಯ್ಯಲಾಗಿದೆ.
ತನ್ನ ಮಾಜಿ ಪತಿಯ ಮೇಲಿನ ವಿರಸದಿಂದಾಗಿಯೇ ಮಗುವನ್ನು ಕೊಂದಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ತನ್ನ ಪತಿ ಮಗುವಿನ ಜತೆ ಮಾತನಾಡಬಾರದು ಎಂಬ ಕಾರಣಕ್ಕಾಗಿ ಸುಚನಾ ಸೇಠ್ ಮಗುವನ್ನೇ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ. 2010ರಲ್ಲಿ ವಿವಾಹವಾಗಿದ್ದ ಸೇಠ್ ದಂಪತಿಗೆ 2019ರಲ್ಲಿ ಗಂಡು ಮಗು ಜನಿಸಿತ್ತು. ಇಬ್ಬರ ನಡುವಿನ ವಿರಸದಿಂದಾಗಿ 2020ರಲ್ಲಿ ವಿವಾಹ ವಿಚ್ಛೇದನ ಪಡೆದಿದ್ದರು. ಆದರೆ ಪ್ರತಿ ಭಾನುವಾರ ಮಗುವನ್ನು ಭೇಟಿಯಾಗಲು ತಂದೆಗೆ ಕೋರ್ಟ್ ಅನುಮತಿ ನೀಡಿದ್ದರಿಂದ ಇದೇ ವಿಚಾರ ಗಲಾಟೆಗೆ ಕಾರಣವಾಗಿತ್ತು.
Bengalore CEO kills 4-year-old son in Goa, carries body in bag to Chitradurga arrested.The CEO of The Mindful AI Lab, Suchana Seth, was arrested in Karnataka's Chitradurga on Monday while transporting her son's body in a bag. The incident happened after she allegedly killed her 4-year-old son in a hotel room in Candolim, North Goa.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm