ಬ್ರೇಕಿಂಗ್ ನ್ಯೂಸ್
09-01-24 08:44 pm Mangaluru Correspondent ಕ್ರೈಂ
ಮಂಗಳೂರು, ಜ.9: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಬೆನ್ನು ಬಿದ್ದಿದ್ದ ಮಂಗಳೂರಿನ ಸಿಸಿಬಿ ಪೊಲೀಸರು ಆತನನ್ನು ಕಡೆಗೂ ಬಲೆಗೆ ಹಾಕಿದ್ದು ರೋಚಕ ಮಿಸ್ಟರಿ. ಮೂರು ದಿನಗಳ ಹಿಂದೆ ಕಾವೂರಿನಲ್ಲಿ ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೆಯೇ ಕಾರು ಹಾಯಿಸಿದ್ದ ರೌಡಿಯನ್ನು ಬಂಧಿಸಲೇಬೇಕೆಂದು ಪೊಲೀಸರು ಬೆನ್ನು ಬಿದ್ದಿದ್ದರು. ಕೊನೆಗೆ, ಮಲ್ಪೆಯಲ್ಲಿ ಅಡಗಿದ್ದಾನೆಂಬ ಮಾಹಿತಿ ಪಡೆದು ಅಲ್ಲಿಂದ ಚೇಸಿಂಗ್ ಮಾಡಿಕೊಂಡು ಬಂದು ಕಡೆಗೂ ಮಂಗಳೂರಿನಲ್ಲಿ ಅಡ್ಡಹಾಕಿ ಬಂಧಿಸಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಒಟ್ಟು ಪ್ರಕರಣದ ಪಿನ್ ಟು ಪಿನ್ ಮಾಹಿತಿಯನ್ನು ಮಾಧ್ಯಮದ ಜೊತೆ ಹಂಚಿಕೊಂಡಿದ್ದಾರೆ. ಎರಡು ಜಿಲ್ಲೆಯಲ್ಲಿ ಆತನ ಮೇಲೆ ಸುಮಾರು 25ಕ್ಕೂ ಹೆಚ್ಚು ಕೇಸುಗಳಿವೆ. ಜೈಲಿನಲ್ಲಿ ಕೊಲೆಯತ್ನ, ಸುಳ್ಯದ ಕೊಲೆ ಪ್ರಕರಣ ಸೇರಿದಂತೆ ಕೊಲೆ, ಕೊಲೆಯತ್ನ ಸೇರಿ 20ಕ್ಕೂ ಹೆಚ್ಚು ಪ್ರಕರಣ ಮಂಗಳೂರಿನಲ್ಲೇ ಇವೆ. ಹಲವಾರು ಪ್ರಕರಣಗಳಲ್ಲಿ ಅರೆಸ್ಟ್ ವಾರೆಂಟ್ ಇತ್ತು. ಹೀಗಾಗಿ 15 ದಿನಗಳಿಂದ ಶರಣ್ ಬಂಧನ ಮಾಡುವುದಕ್ಕಾಗಿ ನಮ್ಮ ಪೊಲೀಸರು ಹಿಂದೆ ಬಿದ್ದಿದ್ದರು.


ಮೂರು ದಿನಗಳ ಹಿಂದೆ ಕಾವೂರಿನಲ್ಲಿ ಅಪಾರ್ಟ್ಮೆಂಟ್ ನಲ್ಲಿದ್ದ ಮಾಹಿತಿ ಅರಿತು ಬಂಧನಕ್ಕೆ ಬಲೆ ಬೀಸಿದ್ದರು. ಆ ಸಂದರ್ಭದಲ್ಲಿ ಪೊಲೀಸರ ಮೇಲೆ ಕಾರು ಹಾಯಿಸಿ ಪರಾರಿಯಾಗಿದ್ದ ಬಗ್ಗೆ ಕಾವೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಈ ನಡುವೆ, ಆತನಿಗೆ ಯಾರೆಲ್ಲ ಸಪೋರ್ಟ್ ಮಾಡಿದ್ದಾರೆಂದು ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಶರತ್ ಭಂಡಾರಿ, ಮಯೂರಿ, ನೀಲಾ ಮತ್ತಿತರರನ್ನು ವಶಕ್ಕೆ ಪಡೆದು ಮಾಹಿತಿ ಪಡೆಯಲಾಗಿತ್ತು. ಮಲ್ಪೆಯಲ್ಲಿ ಮನೆಯೊಂದರಲ್ಲಿ ಅಡಗಿದ್ದಾನೆಂದು ಮಾಹಿತಿ ತಿಳಿದು ಇಂದು ಬೆಳಗ್ಗೆ ಸಿಸಿಬಿ ಎಸ್ಐ ಸುದೀಪ್ ಮತ್ತು ಶರಣಪ್ಪ ಅವರ ತಂಡ ಉಡುಪಿಗೆ ತೆರಳಿತ್ತು.



ಪೊಲೀಸರು ಮಲ್ಪೆ ತಲುಪಿದಾಗ ಶರಣ್ ತಪ್ಪಿಸಿಕೊಂಡಿದ್ದ. ಆಶ್ರಯ ಕೊಟ್ಟಿದ್ದ ಮಂಜೇಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಬಿಳಿ ಐ20 ಕಾರಿನಲ್ಲಿ ಪರಾರಿಯಾಗಿರುವುದು ತಿಳಿದುಬಂದಿತ್ತು. ಟೋಲ್ ಗೇಟ್ ನಲ್ಲಿ ಚೆಕ್ ಮಾಡಿದಾಗ ಮಂಗಳೂರಿಗೆ ಬಂದಿರುವುದು ತಿಳಿದು ಪೊಲೀಸರು ಬೆನ್ನತ್ತಿ ಬಂದಿದ್ದರು. ಪಂಪ್ವೆಲ್ ನಲ್ಲಿ ಐ20 ಕಾರಿನಲ್ಲಿ ಒಬ್ಬಂಟಿಯಾಗಿ ಕಂಕನಾಡಿ ಕಡೆಗೆ ಎಸ್ಕೇಪ್ ಆಗಿರುವುದು ತಿಳಿದು ಚೇಸ್ ಮಾಡಲಾಗಿತ್ತು. ಜೆಪ್ಪು ಕುದ್ಪಾಡಿಯಲ್ಲಿ ನಮ್ಮ ಪೊಲೀಸ್ ತಂಡ ಖಾಸಗಿ ಕಾರಿನಲ್ಲಿ ಆತನನ್ನು ಅಡ್ಡಹಾಕಿತ್ತು. ಕುದ್ಪಾಡಿಯಲ್ಲಿ ಡೆಡ್ ಎಂಡ್ ಆಗಿದ್ದರಿಂದ ಯು ಟರ್ನ್ ಪಡೆಯುತ್ತಲೇ ಪೊಲೀಸರು ಸುತ್ತುವರಿದಿದ್ದಾರೆ. ಅಷ್ಟರಲ್ಲಿ ತನ್ನ ಕೈಲಿದ್ದ ಚೂರಿಯನ್ನು ತೋರಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ನಮ್ಮ ತಂಡದ ಪ್ರಕಾಶ್ ಎಂಬ ಪೇದೆಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಸಿಸಿಬಿ ಎಸ್ಐ ಸುದೀಪ್ ಅವರು ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಪ್ರಕಾಶ್ ಅವರನ್ನೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಶರಣ್ ಕಾಲಿಗೆ ಗಾಯಗೊಂಡಿದ್ದು ಅಪಾಯ ಏನೂ ಆಗಿಲ್ಲ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಆಕಾಶಭವನ್ ಶರಣ್ ಮಂಗಳೂರಿನ ನಟೋರಿಯಸ್ ರೌಡಿಯಾಗಿದ್ದು, 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದಾನೆ. ಹಲವು ಕೇಸುಗಳಲ್ಲಿ ಅರೆಸ್ಟ್ ವಾರೆಂಟ್ ಇದ್ದರೂ ಒಂಟಿ ತೋಳದ ರೀತಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಸುಳ್ಯದ ಕೆವಿಜಿ ಆಡಳಿತಾಧಿಕಾರಿಯ ಕೊಲೆ ಪ್ರಕರಣದಲ್ಲಿ ಈತನ ಮೇಲಿನ ಆರೋಪ ಸಾಬೀತಾಗಿದ್ದು, ದೋಷಿಯೆಂದು ಕೋರ್ಟ್ ತೀರ್ಪು ನೀಡಿದೆ. ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದರಿಂದ ಶಿಕ್ಷೆಯಿಂದ ಪಾರಾಗಿದ್ದಾನೆ. ಮಂಗಳೂರಿನಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿಯ ಪರವಾಗಿ ಹಫ್ತಾ ವಸೂಲಿ ಮಾಡುತ್ತಿದ್ದಾನೆ ಎಂದು ಹೇಳಲಾಗಿತ್ತು. ಈ ಬಗ್ಗೆ ಕಮಿಷನರ್ ಬಳಿ ಕೇಳಿದಾಗ, ಅಂಡರ್ ವರ್ಲ್ಡ್ ಸಂಪರ್ಕ ಇರುವ ಮಾಹಿತಿ ಇದೆ. ಆ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ.
How was Rowdy Akash Bhavan Sharan arrested by CCB Police in Mangalore, Chased from Malpe, caught at Jeppu. The police reportedly shot in the leg of the notorious rowdy 'Akash Bhavan' Sharan on Tuesday, January 9 while he was trying to escape from getting arrested. The shootout took place at Kudupadi in Jeppu. CCB PSI Sudeep reporetedly fired at the accused when he was trying to flee. He has been admitted to a private hospital in Kankanady for treatment.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm