ಬ್ರೇಕಿಂಗ್ ನ್ಯೂಸ್
10-01-24 10:16 pm Bangalore Correspondent ಕ್ರೈಂ
ಬೆಂಗಳೂರು, ಜ.10: ಹೊಸ ವರ್ಷದ ಪಾರ್ಟಿಗೆಂದು ವ್ಯಕ್ತಿಯೊಬ್ಬನನ್ನು ಅಪಹರಿಸಿ ಆತನಿಂದ 5 ಲಕ್ಷ ರೂ. ಕಿತ್ತುಕೊಂಡಿದ್ದಲ್ಲದೆ, ಹಾಗೇ ಬಿಟ್ಟು ಕಳಿಸಿದರೆ ಅಪಾಯ ಎಂದುಕೊಂಡು ಕಾರಿನಲ್ಲಿ ಸುತ್ತಾಡುತ್ತಲೇ ಕೊಲೆಗೈದು ಕಾಡಿನಲ್ಲಿ ಎಸೆದು ಹೋದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಮಸಂದ್ರ ಗಾಯತ್ರಿ ಲೇಔಟ್ನ ಸಂಜಯ್ (25), ಮಂಗನಹಳ್ಳಿ ಕ್ರಾಸ್ ಎಸ್.ಎಂ.ವಿ ಲೇಔಟ್ 5ನೇ ಬ್ಲಾಕ್ ನಿವಾಸಿ ಆನಂದ ಹಾಗೂ ನಾಗದೇವಹಳ್ಳಿ ನಿವಾಸಿ ಹನುಮಂತು ಎಂಬ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ.
ಮೊದಲಿಗೆ ಕಿಶನ್ ಕುಮಾರ್ ಎಂಬ ಯುವಕನನ್ನು ಅಪಹರಿಸಿ ಹತ್ತು ಸಾವಿರ ಹಣಕ್ಕಾಗಿ ಪೀಡಿಸಿದ್ದರು. ಆತ ಉಪಾಯದಿಂದ ತಪ್ಪಿಸಿಕೊಂಡ ಬಳಿಕ ತಮ್ಮ ಪರಿಚಯದ ಸೇಲ್ಸ್ ಎಕ್ಸಿಕ್ಯುಟಿವ್ ಆಗಿದ್ದ ಗುರುಸಿದ್ದಪ್ಪ ಎಂಬಾತನನ್ನು ಡಿ.30ರಂದು ಕಿಡ್ನಾಪ್ ಮಾಡಿದ್ದರು. ನಂತರ, ಆತನ ಪತ್ನಿಗೆ ಕರೆ ಮಾಡಿಸಿ 5 ಲಕ್ಷ ರೂ. ಪೀಕಿಸಿದ್ದಾರೆ. ಆತನಿಂದ ಹಣ ಪಡೆದರೂ, ಆತನನ್ನು ಬಿಟ್ಟು ಕಳುಹಿಸದೇ ಕಾರಿನಲ್ಲಿ ಕೂರಿಸಿ ಮಂಚಿನಬೆಲೆ ಡ್ಯಾಮ್ ಬಳಿ ಸುತ್ತಾಡಿದ್ದಾರೆ. ಅಲ್ಲಿನ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡಿದ್ದ ಗ್ಯಾಂಗ್, ಡಿಸೆಂಬರ್ 31ರ ರಾತ್ರಿ ಪಾರ್ಟಿ ಮಾಡಿ ಗುರು ಸಿದ್ದಪ್ಪನನ್ನು ಬಿಟ್ಟು ಕಳಿಸುವುದಾಗಿ ಹೇಳಿದ್ದರು. ಆದ್ರೆ ಇವನನ್ನು ಬಿಟ್ರೆ ಪೊಲೀಸರಿಗೆ ಹೇಳುತ್ತಾನೆ ಎಂದು ಕೊಲೆ ಮಾಡಿದ್ದಾರೆ. ಗುರುಸಿದ್ದಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ, ಶವವನ್ನು ಕಾಡಿನಲ್ಲಿಯೇ ಬಿಸಾಕಿ, ಅಲ್ಲಿಂದ ಹೊಸ ವರ್ಷ ಆಚರಣೆಗೆ ಗೋವಾಕ್ಕೆ ತೆರಳಿ ಪಾರ್ಟಿ ಮಾಡಿದ್ದಾರೆ.
ಈ ನಡುವೆ ಗುರುಸಿದ್ದಪ್ಪ ಪತ್ನಿ ತನ್ನ ಗಂಡ ಹಣ ಪಡೆದುಕೊಂಡು ಹೋದವರು ಮನೆಗೆ ಬಂದಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ವೇಳೆ ಗುರುಸಿದ್ದಪ್ಪ ಕೊಲೆ ಆಗಿರುವುದು ಪತ್ತೆಯಾಗಿತ್ತು. ಇತ್ತ ಮಂಚಿನಬೆಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಅರೆಬರೆ ತಿಂದು ಉಳಿದಿದ್ದ ಶವದ ಕುರುಹು ಪತ್ತೆಯಾಗಿದೆ. ಶವವನ್ನು ಕಾಡು ಪ್ರಾಣಿಗಳು ತಿಂದಿದ್ದವು. ತಲೆ ಬುರುಡೆ, ಎಲುಬಿನ ಭಾಗಗಳು ಸಿಕ್ಕಿದ್ದು ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
Young man brutally murdered by drunk friends during New Year celebrations in Bengalore. A horrifying incident unfolded on Hanumanta Nagar's 80-foot Road in Bengaluru. The jubilant atmosphere of the night was shattered by a gruesome murder that occurred around 1 am, sending shockwaves through the community.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm