ಬ್ರೇಕಿಂಗ್ ನ್ಯೂಸ್
11-01-24 11:44 am Bangalore Correspondent ಕ್ರೈಂ
ಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ.
ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ.

ಕಪಾಟಿನಲ್ಲಿರಿಸಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಮಾದರಿಯ ಬಂಗಾರದ ಒಡವೆಗಳು, 30 ಸಾವಿರ ರೂ. ನಗದು ಹಾಗೂ ಒಂದು ಮೊಬೈಲ್ ಫೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ- ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗ್ಗೆ ಸುಮಾರು 6.30ರ ವೇಳೆಗೆ ಕಾಲಿಂಗ್ ಬೆಲ್ ಹಾಕಿದ್ದು ಬಾಗಿಲು ತೆಗದ ಕೂಡಲೇ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಚಿನ್ನ, ನಗದು ತೆಗೆದು ಕೊಡುವಂತೆ ಬೆದರಿಸಿದ್ದಾರೆ.
ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದು ಕಪಾಟು ಬೀಗದ ಕೀ ಪಡೆದಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ಆಸ್ಟಿನ್ ಪಿಂಟೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಇದೇ ಪರಿಸರದಲ್ಲಿ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ. ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
House robbery in Bantwal mangalore, Mother daughter tied up, looted of gold and cash.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm