ಬ್ರೇಕಿಂಗ್ ನ್ಯೂಸ್
17-01-24 12:51 pm Udupi Correspondent ಕ್ರೈಂ
ಉಡುಪಿ, ಜ.17: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಬ್ರಹ್ಮಾವರ ತಾಲೂಕಿನ ರಿಕ್ಷಾ ಚಾಲಕ ಕೇಶವ ನಾಯ್ಕ (27) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 13 ವರ್ಷದ ನೊಂದ ಬಾಲಕಿಯು ಶಾಲೆಗೆ ಆರೋಪಿಯ ರಿಕ್ಷಾದಲ್ಲಿ ಹೋಗಿ ಬರುತ್ತಿದ್ದು, ಇದರಿಂದ ಆತ ಬಾಲಕಿಯ ಮನೆಯವರಿಗೂ ಪರಿಚಯಸ್ಥನಾಗಿದ್ದ.
ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ತಿಳಿಸಿದ ಆತ, 2023ರ ಫೆ. 17ರಂದು ಆಕೆಯನ್ನು ಪುಸಲಾಯಿಸಿ ತನ್ನ ರಿಕ್ಷಾದಲ್ಲಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಲ್ಲೂ ಹೇಳಬಾರದೆಂದು ಹೆದರಿಸಿದ್ದ. ಆಕೆ ಗರ್ಭವತಿಯಾದ ಬಳಿಕ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. 28 ಸಾಕ್ಷಿಗಳ ಪೈಕಿ ಅಭಿಯೋಜನೆ ಪರವಾಗಿ 16 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ದೋಷಿ ಎಂದು ಪರಿಗಣಿಸಿ ಅತ್ಯಾಚಾರ ಎಸಗಿರುವುದಕ್ಕೆ 20 ವರ್ಷಗಳ ಕಠಿನ ಜೈಲುಶಿಕ್ಷೆ ಮತ್ತು 20 ಸಾವಿರ ರೂ. ದಂಡ, ಬಾಲಕಿಯನ್ನು ಆಕೆಯ ಹೆತ್ತವರಿಗೆ ಗೊತ್ತಿಲ್ಲದೇ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಕ್ಕೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಬಾಲಕಿಗೆ ಬೆದರಿಕೆ ಹಾಕಿರುವುದಕ್ಕೆ ಒಂದು ವರ್ಷ ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಆರು ತಿಂಗಳ ಶಿಕ್ಷೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 3ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶಿಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
The Udupi Additional District POCSO Special Court has sentenced a man to 20 years rigorous imprisonment for raping a minor girl and making her pregnant.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm