ಬ್ರೇಕಿಂಗ್ ನ್ಯೂಸ್
18-01-24 04:32 pm Mangalore Correspondent ಕ್ರೈಂ
ಉಳ್ಳಾಲ, ಜ.18: ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ, ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.
ಉಳ್ಳಾಲ ಕೋಟೆಪುರದ ಬರಾಖ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ ಜಪ್ತಿಗೊಳಿಸಿದ್ದು ಆರೋಪಿ ಅಬ್ದುಲ್ ಅಲ್ತಾಫ್ (49) ಎಂಬಾತನನ್ನ ಬಂಧಿಸಿದೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲೇ ತೋರ್ಪಡಿಕೆಗೆ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗಿನ ವಿಶಾಲ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನ ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಇಷ್ಟಲ್ಲದೆ ಸ್ಥಳೀಯ ನಾಡ ದೋಣಿಗಾರರಿಗೆ ದುಪ್ಪಟ್ಟು ದರದಲ್ಲಿ ಪೆಟ್ರೋಲನ್ನ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್ ಸಮೇತ ಸಿಬ್ಬಂದಿಗಳಾದ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಿಢೀರ್ ದಾಳಿ ನಡೆಸಿದೆ. ಸುಮಾರು 55 ಕ್ಕೂ ಮಿಕ್ಕಿದ ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್ ನಷ್ಟು ಅಕ್ರಮ ದಾಸ್ತಾನು ಇರಿಸಿದ್ದ ಪೆಟ್ರೋಲನ್ನ ವಶ ಪಡಿಸಿದ್ದು ,ಆರೋಪಿ ಅಲ್ತಾಪ್ ನನ್ನು ಬಂಧಿಸಿದ್ದಾರೆ.
ತಮ್ಮ ಠಾಣೆಯ ಕೂಗಳತೆಯಲ್ಲಿ ರಸ್ತೆ ಬದಿಯಲ್ಲೇ ನಡೆಯುತ್ತಿರುವ ಅಕ್ರಮಗಳು ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಅವರ ಆಪ್ತ ಸಲಹೆಗಾರರಿಗೆ ತಿಳಿಯದ ಸಂಗತಿ ಏನೂ ಅಲ್ಲ. ಎಲ್ಲವೂ ತಿಳಿದು ಪಾಲಿಗೆ ಬಂದದನ್ನ ಪಂಚಾಮೃತವನ್ನಾಗಿ ಸ್ವೀಕರಿಸುತ್ತಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಅವರ ಗುಪ್ತ ಮಾಹಿತಿದಾರರು ಇಂದಿನ ಎಸಿಪಿ ದಾಳಿಯಿಂದ ದಂಗಾಗಿ ಕರಟಿದ ಮುಖದಿಂದ ದಾಳಿಯ ಗುಂಪಿನ ಫೋಟೋಕ್ಕೆ ಪೋಸು ನೀಡಿದ್ದಾರೆ.
Mangalore ACP Dhanya N Nayak and team raids Illegal gas refilling hub at Kotepura in Ullal.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm