ಬ್ರೇಕಿಂಗ್ ನ್ಯೂಸ್
20-01-24 05:20 pm Bangalore Correspondent ಕ್ರೈಂ
ಬೆಂಗಳೂರು, ಜ.20: ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್ನಿಂದ ಸಾಲ ಪಡೆಯಲು ಏಜೆಂಟ್ಗಳಿಗೆ ಸಹಕಾರ ನೀಡುತ್ತಿದ್ದ ಆರೋಪದಡಿ ವಿವಿಧ ಬ್ಯಾಂಕ್ಗಳ ನಾಲ್ವರು ವ್ಯವಸ್ಥಾಪಕರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ್, ಮುರಳೀಧರ್, ಶಶಿಕಾಂತ್, ರಾಕೇಶ್ ಬಂಧಿತರು.
ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್ನಿಂದ ಸಾಲ ಪಡೆಯುತ್ತಿದ್ದ ಏಜೆಂಟ್ಗಳ ವಿರುದ್ಧ ಪುಟ್ಟೇನಹಳ್ಳಿ ಹಾಗೂ ಹುಳಿಮಾವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿತ್ತು. ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಐವರು ಏಜೆಂಟರುಗಳನ್ನು ವಿಚಾರಣೆ ನಡೆಸಿದಾಗ ಏಜೆಂಟರಿಗೆ ಸಾಲ ಪಡೆಯಲು ನೆರವಾಗುತ್ತಿದ್ದ ನಾಲ್ವರು ಬ್ಯಾಂಕ್ ಅಧಿಕಾರಿಗಳ ಸುಳಿವು ಸಿಕ್ಕಿತ್ತು. ಈ ಆಧಾರದ ಮೇಲೆ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ಮಾಡಿ ಇದುವರೆಗೆ ಎಷ್ಟು ಪ್ರಮಾಣದಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಒಂಟಿ ವೃದ್ಧರ ಹೆಸರಿನಲ್ಲಿರುವ ನಿವೇಶನ ಅಥವಾ ಮನೆ ಖರೀದಿಸುವ ನೆಪ ಮಾಡಿಕೊಂಡು ಬಂಧಿತ ಏಜೆಂಟರುಗಳು ನಕಲಿ ದಾಖಲೆ ಸೃಷ್ಟಿಸುತ್ತಿದ್ದರು. ನಂತರ ಬ್ಯಾಂಕ್ ಅಧಿಕಾರಿಗಳ ಮುಂದೆ ಅಸಲಿ ದಾಖಲೆಯೆಂದು ನಂಬಿಸಿ ಲಕ್ಷಾಂತರ ರೂ. ಸಾಲ ಪಡೆಯುತ್ತಿದ್ದರು. ಬ್ಯಾಂಕ್ ಅಧಿಕಾರಿಗಳು ದಾಖಲಾತಿಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸದೇ ಸಾಲ ನೀಡುತ್ತಿದ್ದರು. ಏಜೆಂಟರ ಆಮೀಷಕ್ಕೊಳಗಾಗಿ ಬ್ಯಾಂಕ್ ಅಧಿಕಾರಿಗಳೂ ಅವರಿಗೆ ಸಾಲ ನೀಡಲು ಸಹಕರಿಸುತ್ತಿದ್ದರು
ಹುಳಿಮಾವಿನಲ್ಲಿ ವೃದ್ಧೆಯೊಬ್ಬರ ಮನೆಯ ದಾಖಲೆ ಬಳಸಿಕೊಂಡು ಆರೋಪಿ ಏಜೆಂಟ್ ಗಳು ಬ್ಯಾಂಕ್ಗಳಿಂದ 1.50 ಕೋಟಿ ರೂ. ಸಾಲ ಪಡೆದಿದ್ದರು. ಮತ್ತೂಂದು ಪ್ರಕರಣದಲ್ಲಿ ಪುಟ್ಟೇನಹಳ್ಳಿಯಲ್ಲಿ ವೃದ್ಧೆಯೊಬ್ಬರ ಮನೆಗೆ ಸಂಬಂಧಿಸಿದ ನಕಲಿ ದಾಖಲೆ ಸೃಷ್ಟಿಸಿ 3.85 ಕೋಟಿ ರೂ. ಸಾಲ ಪಡೆದಿದ್ದರು. ಹುಳಿಮಾವು ನಿವಾಸಿ ಅಂಡಾಳ್ ಕುಪ್ಪಣ್ಣ (85) ಎಂಬುವವರ ಮನೆ ಖರೀದಿಸುವ ನೆಪದಲ್ಲಿ ದಾಖಲೆ ಪಡೆದು ಬ್ಯಾಂಕ್ಗೆ ಸಲ್ಲಿಸಿ ಸಾಲ ಮಂಜೂರು ಮಾಡಿಸಿಕೊಂಡಿದ್ದರು. 2023ರ ಡಿಸೆಂಬರ್ನಲ್ಲಿ ಏಜೆಂಟರುಗಳ ಕಳ್ಳಾಟದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಪ್ರಕರಣವು ಪೊಲೀಸ್ ಠಾಣೆ ಮೆಟ್ಟಿಲೇರಿದ ಬಳಿಕ ಏಜೆಂಟರಾದ ಭಾಸ್ಕರ್ ಕೃಷ್ಣ, ಮಹೇಶ್, ಅರುಣ್, ದಿವಾಕರ್ ಅವರನ್ನು ಬಂಧಿಸಿದ್ದರು.
The CCB police have arrested four managers of various banks for allegedly assisting agents in obtaining loans from banks by creating fake documents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm