ಬ್ರೇಕಿಂಗ್ ನ್ಯೂಸ್
22-11-20 11:11 am Mangalore Correspondent ಕ್ರೈಂ
ಮಂಗಳೂರು, ನವೆಂಬರ್ 21 : ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.

ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
A case was filed at Ullal police station after a woman lost her mangal sutra worth Rs 60,000 and cash Rs 20,000. The woman was duped by a man who assured her that hospitals are providing money for corona.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm