ಬ್ರೇಕಿಂಗ್ ನ್ಯೂಸ್
22-11-20 11:11 am Mangalore Correspondent ಕ್ರೈಂ
ಮಂಗಳೂರು, ನವೆಂಬರ್ 21 : ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಎರಡು ಲಕ್ಷ ರೂ. ಹಣ ಸಿಗುವುದೆಂದು ನಂಬಿಸಿ ಮಹಿಳೆಯ ಕರಿಮಣಿ ಸರ ಮತ್ತು 20 ಸಾವಿರ ನಗದನ್ನು ಲಪಟಾಯಿಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.

ಮಹಿಳೆಯೊಬ್ಬರು ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ರೇಷನ್ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬ ತನ್ನನ್ನು ರಾಕೇಶ್ ಎಂದು ಪರಿಚಯಿಸಿದ್ದು ಬ್ಯಾಂಕ್ ಅಧಿಕಾರಿಯೆಂದು ಹೇಳಿಕೊಂಡಿದ್ದಾನೆ. ಕೊರೊನಾ ಕಾರಣದಿಂದ ಸರಕಾರದಿಂದ ಹಣ ಬಂದಿದೆ. ಅದಕ್ಕಾಗಿ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಬೇಕು. ಟೆಸ್ಟಿಂಗ್ ಮಾಡಿ ರಿಪೋರ್ಟ್ ನೀಡಲು ವೈದ್ಯರಿಗೆ 20 ಸಾವಿರ ರೂ. ಕೊಡಬೇಕಾಗುತ್ತದೆ ಎಂದು ಹೇಳಿದ್ದಾನೆ. ಮಹಿಳೆಗೆ ನಂಬಿಕೆ ಬರಲು ತೊಕ್ಕೊಟ್ಟಿನಲ್ಲಿ ಆಸ್ಪತ್ರೆಗೂ ಕರೆದೊಯ್ದಿದ್ದಾನೆ. ಆದರೆ, ಆಸ್ಪತ್ರೆಯ ಹೊರಗೆ ನಿಂತು ಇಲ್ಲಿ ಟೆಸ್ಟ್ ಮಾಡಿ ಓಕೆ ಆದರೆ ಎರಡು ಲಕ್ಷ ಸಿಗುತ್ತೆ ಅಂತ ನಂಬಿಸಿದ್ದಾನೆ.
ಕೊನೆಗೆ, ಮಹಿಳೆಯು ತನ್ನಲ್ಲಿರುವ ಕರಿಮಣಿ ಸರವನ್ನು ಒಮ್ಮೆಗೆ ಅಡ ಇಟ್ಟು ಹಣ ತರುವ ಉಪಾಯ ಹೇಳಿದ್ದಾನೆ. ಮಹಿಳೆ ಅದಕ್ಕೆ ಒಪ್ಪಿದ್ದಲ್ಲದೆ, ಸರವನ್ನು ತೆಗೆದು ಯುವಕನ ಕೈಗೆ ಕೊಟ್ಟಿದ್ದಾರೆ. ಈ ವೇಳೆ, ನಿಮ್ಮ ಕುತ್ತಿಗೆ ಖಾಲಿಯಾಗುವುದು ಬೇಡ, ಇದು ತನ್ನ ತಾಯಿಯ ಸರವೆಂದು ಹೇಳಿ ಬೇರೊಂದು ಸರವನ್ನು ಮಹಿಳೆಯ ಕೈಗಿತ್ತಿದ್ದಾನೆ. ಮಹಿಳೆಯ ನಂಬಿಕೆ ಗಳಿಸಲು ನಕಲಿ ಸರವನ್ನು ಕೊಟ್ಟು ಆಕೆಯ ಚಿನ್ನದ ಸರ ಪಡೆದು ಆಸ್ಪತ್ರೆಯ ಒಳ ಹೋದವ ಮತ್ತೆ ಬರಲಿಲ್ಲ. ಅಲ್ಲಿಂದಲೇ ಪರಾರಿಯಾಗಿದ್ದಾನೆ. ಮಹಿಳೆ ಕಾದು ಸುಸ್ತಾಗಿ ಆಸ್ಪತ್ರೆಯ ಸಿಬಂದಿ ಬಳಿ ವಿಚಾರಿಸಿದಾಗ ತಾನು ಮೋಸ ಹೋಗಿದ್ದು ಅರಿವಾಗಿದೆ. ಅಲ್ಲದೆ, ಆತ ನೀಡಿದ್ದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಮಹಿಳೆ ಬಳಿಕ ಉಳ್ಳಾಲ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
A case was filed at Ullal police station after a woman lost her mangal sutra worth Rs 60,000 and cash Rs 20,000. The woman was duped by a man who assured her that hospitals are providing money for corona.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm