ಬ್ರೇಕಿಂಗ್ ನ್ಯೂಸ್
24-01-24 06:18 pm HK News Desk ಕ್ರೈಂ
ಮೈಸೂರು, ಜ 24: ಹೆತ್ತ ತಾಯಿ ಹಾಗೂ ತಂಗಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಸ್ವಂತ ಮಗನಿಂದಲೇ ಕೃತ್ಯ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ವಿಚಾರವಾಗಿ ತಂಗಿಯೊಂದಿಗೆ ದ್ವೇಷ ಬೆಳೆಸಿಕೊಂಡಿದ್ದ ಅಣ್ಣ ನಿತಿನ್ ಈ ಕೃತ್ಯ ಎಸಗಿದ್ದಾನೆ. ಆರೋಪಿಯು ಮೊದಲು ತಂಗಿಯನ್ನು ಕೆರೆಗೆ ತಳ್ಳಿದ್ದ. ಈ ವೇಳೆ ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ. ಹಿರಿಕ್ಯಾತನಹಳ್ಳಿಯ ಅನಿತಾ(40) ಹಾಗೂ ಮಗಳು ಧನುಶ್ರೀ(19) ಮೃತರು.

ಹನಗೋಡು ಗ್ರಾಮದ ಬೇರೆ ಯುವಕನೊಂದಿಗಿನ ಪ್ರೀತಿ ವಿಚಾರವಾಗಿ ಅಣ್ಣ-ತಂಗಿ ಮಧ್ಯೆ ವೈಮನಸ್ಸು ಬೆಳೆದಿತ್ತು. ಆಗಾಗ ಇಬ್ಬರ ನಡುವೆ ಗಲಾಟೆ ಕೂಡ ನಡೆಯುತ್ತಿತ್ತು. ನಾವೇ ಹಲವು ಬಾರಿ ಸಮಾಧಾನಪಡಿಸಿದ್ದೆವು. ಮಂಗಳವಾರ ಸಂಜೆ ಹೆಮ್ಮಿಗೆ ಗ್ರಾಮದಲ್ಲಿರುವ ಮಾವನ ಮನೆಗೆ ಹೋಗುವ ಕಾರಣ ನೀಡಿ ತಾಯಿ ಹಾಗೂ ತಂಗಿಯನ್ನು ನಿತಿನ್ ಬೈಕ್ನಲ್ಲಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ ಎಂದು ತಂದೆ ಸತೀಶ್ ಹೇಳಿದ್ದಾರೆ. ಒದ್ದೆ ಬಟ್ಟೆಯಲ್ಲೇ ಮನೆಗೆ ಹಿಂದಿರುಗಿ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಸತೀಶ್ ತಿಳಿಸಿದ್ದಾರೆ.
ಘಟನೆ ಬಳಿಕ ಪಶ್ಚಾತ್ತಾಪ ಪಟ್ಟು ತಾಯಿಯನ್ನು ರಕ್ಷಿಸಲು ನಿತಿನ್ ಕೆರೆಗೆ ಹಾರಿದ್ದಾನೆ. ಆದ್ರೆ, ಅಷ್ಟರಲ್ಲಾಗಲೇ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ. ಆರೋಪಿ ನಿತಿನ್ನನ್ನು ಹುಣಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
In a shocking incident, a mother and her sister were allegedly pushed into a lake and murdered at Marur village in Hunsur taluk on Jan. 24. The crime was committed by his own son. The accused has been arrested by the police.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am