ಬ್ರೇಕಿಂಗ್ ನ್ಯೂಸ್
25-01-24 03:10 pm HK News Desk ಕ್ರೈಂ
ವಿಜಯಪುರ, ಜ 25: ನಗರದ ಪೊಲೀಸ್ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.

ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
ಯಾವಾಗ ಯುವತಿ ತನ್ನನ್ನ ಮದುವೆಯಾಗಬೇಕೆಂದು ದುಂಬಾಲು ಬಿದ್ದಳೋ ಆಗಿನಿಂದ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಸೇವೆಗೆ ಗೈರಾಗಿ ನಾಪತ್ತೆಯಾಗಿದ್ದಾನೆ. ಕಳೆದ 20 ದಿನಗಳಿಂದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ಆತ ಸೇವೆಗೆ ಹಾಜರಾಗಿಲ್ಲ. ಯುವತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿನಾಯಕ ಟಕ್ಕಳಕಿ ಪತ್ತೆಗೆ ಬೀಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ವಿನಾಯಕ ಟಕ್ಕಳಕಿ ಬಂಧನವಾಗಬೇಕು. ಕಾನೂನಿನ ಪ್ರಕಾರ ಆತನಿಗೆ ಶಿಕ್ಷೆ ಆಗಬೇಕು. ಇಲ್ಲವೇ ನನ್ನ ಜೊತೆ ಆತ ಮದುವೆಯಾಗಬೇಕೆಂದು ಯುವತಿ ಪಟ್ಟು ಹಿಡಿದಿದ್ದಾಳೆ. ಪೊಲೀಸ್ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಯ ಲವ್, ಸೆಕ್ಸ್, ದೋಖಾ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Police constable Vinayak alleged of Love sex and cheating of marriage at Vijayapura. A cade has been filed at Women police station. The police constable is said to be Missing since then.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm