ಬ್ರೇಕಿಂಗ್ ನ್ಯೂಸ್
25-01-24 10:09 pm Udupi Correspondent ಕ್ರೈಂ
ಉಡುಪಿ, ಜ 25: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ.
ಕಾಪು ಮಜೂರು ನಿವಾಸಿ ಶಂಶುದ್ದೀನ್(24) ಶಿಕ್ಷೆಗೆ ಗುರಿಯಾಗಿರುವ ಆರೋಪಿ.
ಆರೋಪಿ ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಡುತ್ತಿದ್ದು, ಆತ ತನ್ನ ಮೊಬೈಲ್ನಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ ತೆಗೆದಿದ್ದ. ಬಳಿಕ ಫೋಟೋವನ್ನು ಬೇರೆಯವರಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಬೆದರಿಸಿ, ನನ್ನ ಜೊತೆ ಬಂದಲ್ಲಿ ಫೋಟೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದ.
ಅದರಂತೆ ನೊಂದ ಬಾಲಕಿಯನ್ನು ಕಾಪುವಿನ ಲಾಡ್ಜ್ಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಎಂದು ಸುಳ್ಳು ಮಾಹಿತಿ ಕೊಟ್ಟು ರೂಮ್ ಪಡೆದು ಅತ್ಯಾಚಾರ ಎಸಗಿದ್ದ. ಅದೇ ಸಮಯ ಆರೋಪಿ ನೊಂದ ಬಾಲಕಿಯ ಅರೆ ನಗ್ನ ಚಿತ್ರಗಳನ್ನು ತೆಗೆದು ವಿಡಿಯೋ ಮಾಡಿದ್ದ. ವಿಡಿಯೋ ಡಿಲೀಟ್ ಮಾಡಬೇಕಾದರೆ ಹಣ ಕೊಡ್ಬೇಕು ಅಂತ ಬ್ಲಾಕ್ ಮೇಲ್ ಮಾಡ್ತಿದ್ದ. ಅದೇ ರೀತಿ ಬೆದರಿಸಿ ಕಾಪುವಿನ ರೆಸಾರ್ಟ್ಗೆ ಕರೆದು ಕೊಂಡು ಹೋಗಿ ಬಾಲಕಿಗೆ ದೌರ್ಜನ್ಯ ಎಸಗಿದ್ದ ಎಂದು ದೂರಲಾಗಿತ್ತು.
ಆರೋಪಿ ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಆಕೆಯ ಅರೆನಗ್ನ ಚಿತ್ರಗಳನ್ನು ಆಕೆಯ ತಾಯಿಯ ಮೊಬೈಲ್ಗೆ ಕಳುಹಿಸಿ ತಾನು ಕೇಳಿದಷ್ಟು ಹಣ ಕೊಡ್ಬೇಕು ಅಂತ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ನೊಂದ ಬಾಲಕಿಯನ್ನ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ ನೀಡಿದ ದೂರಿನಂತೆ ಆಗಿನ ಕಾಪು ಪೊಲೀಸ್ ಠಾಣಾ ಎಸ್ಸೈ ರಾಘವೇಂದ್ರ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ ಆಗಿನ ವೃತ್ತ ನಿರೀಕ್ಷಕ ಪ್ರಕಾಶ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಒಟ್ಟು 13 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಮೊಬೈಲ್ಗಳಲ್ಲಿದ್ದ ಭಾವಚಿತ್ರದ ಬಗ್ಗೆ ಅಭಿಯೋಜನೆ ಸಲ್ಲಿಸಿರುವ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅತ್ಯಾಚಾರ ಎಗಿರುವ ಕಾರಣ 20ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನ ಉಡುಪಿ ನ್ಯಾಯಾಲಯ ವಿಧಿಸಿದೆ.
Udupi rape accused gets 20 years rigorous imprisonment for raping minor. Accused Shamsuddin was a auto driver by profession and has raped a minor girl by blackmailing her of her photos.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm