ಬ್ರೇಕಿಂಗ್ ನ್ಯೂಸ್
22-11-20 03:13 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 22: ಮಲೈಕಾ ಕೋ ಆಪರೇಟಿವ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ ಜೋಸ್ ಎಂಬವರನ್ನು ಬಂಧಿಸಿದ್ದಾರೆ.
ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಒಂದು ತಿಂಗಳಾದ್ರೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂದು ಹೆಡ್ ಲೈನ್ ಕರ್ನಾಟಕ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಪೊಲೀಸರು ಈಗ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಗ್ರಾಹಕರನ್ನು ವಂಚಿಸಿದ್ದ ಆರೋಪ ಎದುರಿಸುತ್ತಿರುವ ರೀನಾ ಜೋಸ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಆದರೆ, ಪೊಲೀಸರು ಮಂಗಳೂರಿನಲ್ಲಿಯೇ ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.


ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಮತ್ತಷ್ಟು ವಿಚಾರಣೆಗಾಗಿ ಮೂರು ದಿನಗಳ ಕಸ್ಟಡಿ ಪಡೆದಿದ್ದಾರೆ. ಇದೇ ವೇಳೆ, ಇತರೇ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿದ್ದ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ, ಸಂಸ್ಥೆಯ ಮುಖ್ಯಸ್ಥ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ಆಪ್ತೆಯೂ ಆಗಿದ್ದಳು. ಗಿಲ್ಬರ್ಟ್ ಮತ್ತು ರೀನಾ ಜೋಸ್ ಸೇರಿ ನೂರಾರು ಗ್ರಾಹಕರಿಗೆ ಟೋಪಿ ಹಾಕಿದ್ದಾರೆ ಎಂದು ದೂರು ಕೇಳಿಬಂದಿತ್ತು.

ಮಲೈಕಾ ಸೊಸೈಟಿ ಮಂಗಳೂರು, ಉಡುಪಿ, ಗೋವಾ, ಮುಂಬೈ ಸೇರಿದಂತೆ ಹಲವೆಡೆ ನೂರಾರು ಕಚೇರಿಗಳನ್ನು ಹೊಂದಿದ್ದು, ಸಾವಿರಾರು ಗ್ರಾಹಕರು ತಮ್ಮ ಕಷ್ಟದ ದುಡ್ಡನ್ನು ಡಿಪಾಸಿಟ್ ಮಾಡಿದ್ದರು. ಅಂದಾಜು 350 ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲೇ 150ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿದ್ದಾರೆ.
Headline Karnataka Impact, Malaika Credit Society Mangalore Manager Reena Josh has been arrested by the Pandeshwar Police in connection of Cheating investors of 350 crores by the company MD Gilbert Baptist and others.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm