ಬ್ರೇಕಿಂಗ್ ನ್ಯೂಸ್
22-11-20 03:13 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 22: ಮಲೈಕಾ ಕೋ ಆಪರೇಟಿವ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ ಜೋಸ್ ಎಂಬವರನ್ನು ಬಂಧಿಸಿದ್ದಾರೆ.
ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಒಂದು ತಿಂಗಳಾದ್ರೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂದು ಹೆಡ್ ಲೈನ್ ಕರ್ನಾಟಕ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಪೊಲೀಸರು ಈಗ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಗ್ರಾಹಕರನ್ನು ವಂಚಿಸಿದ್ದ ಆರೋಪ ಎದುರಿಸುತ್ತಿರುವ ರೀನಾ ಜೋಸ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಆದರೆ, ಪೊಲೀಸರು ಮಂಗಳೂರಿನಲ್ಲಿಯೇ ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.


ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಮತ್ತಷ್ಟು ವಿಚಾರಣೆಗಾಗಿ ಮೂರು ದಿನಗಳ ಕಸ್ಟಡಿ ಪಡೆದಿದ್ದಾರೆ. ಇದೇ ವೇಳೆ, ಇತರೇ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿದ್ದ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ, ಸಂಸ್ಥೆಯ ಮುಖ್ಯಸ್ಥ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ಆಪ್ತೆಯೂ ಆಗಿದ್ದಳು. ಗಿಲ್ಬರ್ಟ್ ಮತ್ತು ರೀನಾ ಜೋಸ್ ಸೇರಿ ನೂರಾರು ಗ್ರಾಹಕರಿಗೆ ಟೋಪಿ ಹಾಕಿದ್ದಾರೆ ಎಂದು ದೂರು ಕೇಳಿಬಂದಿತ್ತು.

ಮಲೈಕಾ ಸೊಸೈಟಿ ಮಂಗಳೂರು, ಉಡುಪಿ, ಗೋವಾ, ಮುಂಬೈ ಸೇರಿದಂತೆ ಹಲವೆಡೆ ನೂರಾರು ಕಚೇರಿಗಳನ್ನು ಹೊಂದಿದ್ದು, ಸಾವಿರಾರು ಗ್ರಾಹಕರು ತಮ್ಮ ಕಷ್ಟದ ದುಡ್ಡನ್ನು ಡಿಪಾಸಿಟ್ ಮಾಡಿದ್ದರು. ಅಂದಾಜು 350 ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲೇ 150ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿದ್ದಾರೆ.
Headline Karnataka Impact, Malaika Credit Society Mangalore Manager Reena Josh has been arrested by the Pandeshwar Police in connection of Cheating investors of 350 crores by the company MD Gilbert Baptist and others.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am