ಬ್ರೇಕಿಂಗ್ ನ್ಯೂಸ್
29-01-24 06:50 pm Bangalore Correspondent ಕ್ರೈಂ
ಬೆಂಗಳೂರು, ಜ 29: ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಅಧಿಕಾರಿಗಳ ಸೋಗಿನಲ್ಲಿ ಜ್ಯುವೆಲ್ಲರ್ಸ್ ಶಾಪ್ ದೋಚಿ ಪರಾರಿಯಾಗಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಕೆ.ಆರ್.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು.
ಜನವರಿ 27ರಂದು ಕಾರಿನಲ್ಲಿ ಕೆ.ಆರ್.ಪುರಂನ ಮಹಾಲಕ್ಷ್ಮಿ ಜ್ಯುವೆಲರ್ಸ್ ಶಾಪ್ಗೆ ಬಂದಿದ್ದ ಆರೋಪಿಗಳು, ತಾವು 'ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು, ಬೆಂಗಳೂರಿನ ಹಲವು ಚಿನ್ನದಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ. ಹೀಗಾಗಿ ದಾಳಿ ಮಾಡಿದ್ದೇವೆ' ಎಂದಿದ್ದರು.
ಸುಮಾರು 40 ನಿಮಿಷ ಅಂಗಡಿಯಲ್ಲಿ ಶೋಧ ನಡೆಸಿದಂತೆ ಮಾಡಿ ಬಳಿಕ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು, ಬಳಿಕ ಅಂಗಡಿ ಮಾಲೀಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಬಿಐಎಸ್ ಕಚೇರಿಗೆ ಬರುವಂತೆ ಹೇಳಿ ತೆರಳಿದ್ದರು. ಆದರೆ ಹೊರಡುವ ಮುನ್ನ ಚಿನ್ನದ ಅಂಗಡಿಯ ಸಿಸಿಟಿವಿ ಡಿವಿಆರ್ನ್ನು ಆರೋಪಿಗಳು ಪಡೆದುಕೊಂಡಿದ್ದರು.
ಇದರಿಂದ ಅನುಮಾನಗೊಂಡ ಚಿನ್ನದ ಅಂಗಡಿಯ ಕೆಲ ಸಿಬ್ಬಂದಿ ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿದ್ದಾರೆ. ಇತ್ತ ಅಂಗಡಿ ಮಾಲೀಕ ಸಹ ಅನುಮಾನಗೊಂಡು ಕೆಆರ್ಪುರಂ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಿಂಬಾಲಿಸುತ್ತಿರುವುದನ್ನು ತಿಳಿದ ಆರೋಪಿಗಳು ತಪ್ಪಿಸಿಕೊಳ್ಳುವ ಭರದಲ್ಲಿ ಟಿ.ಸಿ ಪಾಳ್ಯ ಜಂಕ್ಷನ್ ಬಳಿ ಸರಣಿ ಅಪಘಾತವೆಸಗಿದ್ದಾರೆ. ಆದರೆ ಸಿನಿಮೀಯ ಮಾದರಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ ಸಂಪತ್ ಈ ಹಿಂದೆ ಮಂಡ್ಯದಲ್ಲಿ ಕಳ್ಳತನ ಪ್ರಕರಣದ ಆರೋಪಿಯಾಗಿದ್ದು, ಸೆರೆವಾಸ ಅನುಭವಿಸಿ ಬಿಡುಗಡೆಯಾಗಿದ್ದ. ಬಳಿಕ ತಮಿಳುನಾಡು ಮೂಲದ ವ್ಯಕ್ತಿಯೊಬ್ಬನ ಸೂಚನೆಯಂತೆ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ತಿಳಿದು ಬಂದಿದೆ. ಆರೋಪಿಗಳ ಬಂಧನವಾಗುತ್ತಿದ್ದಂತೆ ತಮಿಳುನಾಡು ಮೂಲದ ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
Four make fake raid as BIS officers at Mahalakshmi Jewellers in Bangalore, arrested. The four were caught just like movie style by police
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm