ಬ್ರೇಕಿಂಗ್ ನ್ಯೂಸ್
29-01-24 06:50 pm Bangalore Correspondent ಕ್ರೈಂ
ಬೆಂಗಳೂರು, ಜ 29: ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಅಧಿಕಾರಿಗಳ ಸೋಗಿನಲ್ಲಿ ಜ್ಯುವೆಲ್ಲರ್ಸ್ ಶಾಪ್ ದೋಚಿ ಪರಾರಿಯಾಗಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಕೆ.ಆರ್.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು.
ಜನವರಿ 27ರಂದು ಕಾರಿನಲ್ಲಿ ಕೆ.ಆರ್.ಪುರಂನ ಮಹಾಲಕ್ಷ್ಮಿ ಜ್ಯುವೆಲರ್ಸ್ ಶಾಪ್ಗೆ ಬಂದಿದ್ದ ಆರೋಪಿಗಳು, ತಾವು 'ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು, ಬೆಂಗಳೂರಿನ ಹಲವು ಚಿನ್ನದಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ. ಹೀಗಾಗಿ ದಾಳಿ ಮಾಡಿದ್ದೇವೆ' ಎಂದಿದ್ದರು.

ಸುಮಾರು 40 ನಿಮಿಷ ಅಂಗಡಿಯಲ್ಲಿ ಶೋಧ ನಡೆಸಿದಂತೆ ಮಾಡಿ ಬಳಿಕ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು, ಬಳಿಕ ಅಂಗಡಿ ಮಾಲೀಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಬಿಐಎಸ್ ಕಚೇರಿಗೆ ಬರುವಂತೆ ಹೇಳಿ ತೆರಳಿದ್ದರು. ಆದರೆ ಹೊರಡುವ ಮುನ್ನ ಚಿನ್ನದ ಅಂಗಡಿಯ ಸಿಸಿಟಿವಿ ಡಿವಿಆರ್ನ್ನು ಆರೋಪಿಗಳು ಪಡೆದುಕೊಂಡಿದ್ದರು.
ಇದರಿಂದ ಅನುಮಾನಗೊಂಡ ಚಿನ್ನದ ಅಂಗಡಿಯ ಕೆಲ ಸಿಬ್ಬಂದಿ ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿದ್ದಾರೆ. ಇತ್ತ ಅಂಗಡಿ ಮಾಲೀಕ ಸಹ ಅನುಮಾನಗೊಂಡು ಕೆಆರ್ಪುರಂ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಿಂಬಾಲಿಸುತ್ತಿರುವುದನ್ನು ತಿಳಿದ ಆರೋಪಿಗಳು ತಪ್ಪಿಸಿಕೊಳ್ಳುವ ಭರದಲ್ಲಿ ಟಿ.ಸಿ ಪಾಳ್ಯ ಜಂಕ್ಷನ್ ಬಳಿ ಸರಣಿ ಅಪಘಾತವೆಸಗಿದ್ದಾರೆ. ಆದರೆ ಸಿನಿಮೀಯ ಮಾದರಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ ಸಂಪತ್ ಈ ಹಿಂದೆ ಮಂಡ್ಯದಲ್ಲಿ ಕಳ್ಳತನ ಪ್ರಕರಣದ ಆರೋಪಿಯಾಗಿದ್ದು, ಸೆರೆವಾಸ ಅನುಭವಿಸಿ ಬಿಡುಗಡೆಯಾಗಿದ್ದ. ಬಳಿಕ ತಮಿಳುನಾಡು ಮೂಲದ ವ್ಯಕ್ತಿಯೊಬ್ಬನ ಸೂಚನೆಯಂತೆ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ತಿಳಿದು ಬಂದಿದೆ. ಆರೋಪಿಗಳ ಬಂಧನವಾಗುತ್ತಿದ್ದಂತೆ ತಮಿಳುನಾಡು ಮೂಲದ ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
Four make fake raid as BIS officers at Mahalakshmi Jewellers in Bangalore, arrested. The four were caught just like movie style by police
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm