ಬ್ರೇಕಿಂಗ್ ನ್ಯೂಸ್
01-02-24 01:54 pm HK News Desk ಕ್ರೈಂ
ಕಾಸರಗೋಡು, ಫೆ.1: ಕಾಸರಗೋಡಿನ ವ್ಯಕ್ತಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ದು ಹನಿಟ್ರ್ಯಾಪ್ ಮಾಡಿರುವ ಪ್ರಕರಣದ ಬೆನ್ನತ್ತಿದ ಮೇಲ್ಪರಂಬ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾಂಗಾಡ್ ನಿವಾಸಿಯನ್ನು ಹನಿಟ್ರ್ಯಾಪ್ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಬಗ್ಗೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೋಜಿಕ್ಕೋಡ್ ಮೂಲದ ಎಂ.ಪಿ.ರುಬೀನಾ(29), ಆಕೆಯ ಪತಿ ಪ್ರಕರಣದ ಸೂತ್ರಧಾರ ಫೈಝಲ್ (37), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್. ಸಿದ್ದಿಕ್ (48), ಮಾಂಗಾಡ್ನ ದಿಲ್ಶಾದ್ (40), ಮುಟ್ಟತ್ತೋಡಿಯ ನಫೀಸತ್ ಮಿಸ್ರಿಯ (40), ಮಾಂಗಾಡ್ನ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್ನ ರಫೀಕ್ ಮಹಮ್ಮದ್ (42) ಬಂಧಿತ ಆರೋಪಿಗಳು.
ಜನವರಿ 23 ರಂದು ರುಬಿನಾ ಎಂಬಾಕೆ ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಳು. ಶೈಕ್ಷಣಿಕ ಉದ್ದೇಶಕ್ಕಾಗಿ ಲ್ಯಾಪ್ ಟಾಪ್ ಖರೀದಿಸಿದ್ದು ಅದು ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಅದಕ್ಕಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಳು. ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಅವರು ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ. ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು.
ಲ್ಯಾಪ್ಟಾಪ್ ಖರೀದಿಸುವ ನೆಪದಲ್ಲಿ ಆರೋಪಿ ಯುವತಿ ರುಬಿನಾ ಮಂಗಳೂರಿಗೆ ಬಂದಿದ್ದಳು. ಈ ವೇಳೆ, ಆ ವ್ಯಕ್ತಿಯೊಂದಿಗೆ ಸಲುಗೆಯಲ್ಲಿದ್ದ ವಸತಿ ಗೃಹವೊಂದಕ್ಕೆ ತೆರಳಿದ್ದರು. ಅಷ್ಟರಲ್ಲಿ ರುಬಿನಾ ಪತಿ ಸೇರಿದಂತೆ ಐದಾರು ಮಂದಿಯ ತಂಡ ಎಂಟ್ರಿಯಾಗಿದ್ದು ಬಲವಂತದಿಂದ ನಗ್ನ ಫೋಟೊ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿಗಳು ಆ ವ್ಯಕ್ತಿಯನ್ನು ಕಾಸರಗೋಡಿಗೆ ಕರೆದೊಯ್ದು ಕೂಡಿಹಾಕಿ ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದಾರೆ. ಆನಂತರವೂ, ಆರೋಪಿಗಳು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದರು.
ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮೇಲ್ಪರಂಬ ಠಾಣಾ ಎಸ್ ಐ ಸುರೇಶ್ ಮತ್ತು ಅರುಣ್ ಮೋಹನ್ ಹನಿಟ್ರಾಪ್ ತಂಡದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
Kerala Police arrested seven people, including a woman, on Wednesday for embezzling around Rs 5 lakh from a 59-year-old man through 'honey trap'. The arrested are Kasaragod natives Dilshad, Siddique, Lubna, Faisal and three others.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am