ಬ್ರೇಕಿಂಗ್ ನ್ಯೂಸ್
01-02-24 10:35 pm Mangalore Correspondent ಕ್ರೈಂ
ಮಂಗಳೂರು, ಫೆ.1: ಮಂಗಳೂರಿನ ಮುಸ್ಲಿಂ ಮಹಿಳೆಯೊಬ್ಬರಿಗೆ ಬ್ರಹ್ಮಾವರ ಮೂಲದ ಯುವಕನೊಬ್ಬ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆರು ಲಕ್ಷ ರೂಪಾಯಿ ಹಣ ಲಪಟಾಯಿಸಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಮಾನೂರು ಗ್ರಾಮದ ದೇವದಾಸ್ ದೇವಾಡಿಗ(42) ಆರೋಪಿಯಾಗಿದ್ದು, ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ನಂಬಿಸಿ ಮದುವೆಯಾಗುತ್ತೇನೆಂದು ಹೇಳಿ 2021ರಿಂದ ಎರಡು ವರ್ಷಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಕ್ಕಿದ್ದ ಈ ವ್ಯಕ್ತಿ ತನ್ನ ಮೊಬೈಲಿನಲ್ಲಿ ಮಹಿಳೆಯ ಫೋಟೋ ಕ್ಲಿಕ್ಕಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಆನಂತರ, ಮಹಿಳೆಯ ಕೈಯಿಂದಲೇ ಆರು ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದಿದ್ದು, ಆನಂತರ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ.
ಹಣ ಪಡೆದಿದ್ದಲ್ಲದೆ, ದೈಹಿಕ ಸಂಪರ್ಕ ನಡೆಸಿ ಮೋಸ ಮಾಡಿರುವ ಯುವಕನ ಬಗ್ಗೆ ಮಹಿಳೆ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನಲ್ಲಿ ನೆಲೆಸಿದ್ದರೂ, ಮೂಲತಃ ಬ್ರಹ್ಮಾವರ ಮೂಲದವವರು. ಈ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯಲ್ಲಿದ್ದೇನೆಂದು ಹೇಳಿ ಯುವಕ ಮಹಿಳೆಗೆ ನೈತಿಕ ಬೆಂಬಲ ನೀಡುತ್ತೇನೆಂದು ಹೇಳಿ ಹತ್ತಿರವಾಗಿದ್ದು ಬಳಿಕ ಮೋಸ ಮಾಡಿದ್ದಾನೆ. ಈ ಬಗ್ಗೆ ನೊಂದಿರುವ ಮಹಿಳೆ ಉಡುಪಿ ಎಸ್ಪಿ ಅವರನ್ನು ಭೇಟಿಯಾಗಿ ಎರಡು ತಿಂಗಳ ಹಿಂದೆ ದೂರು ನೀಡಿದ್ದರು. ಕೋಟ ಠಾಣೆಗೆ ಪ್ರಕರಣ ವರ್ಗಾಯಿಸಿದ್ದ ಎಸ್ಪಿ ಆರೋಪಿ ಬಂಧನಕ್ಕೆ ಸೂಚಿಸಿದ್ದರು. ಆದರೆ, ಕೋಟ ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಯನ್ನು ಬಂಧಿಸಿಲ್ಲ. ಮಹಿಳೆ ಬಳಿಕ ಆರೋಪಿಯ ಬಂಧನದ ಬಗ್ಗೆ ಪ್ರಶ್ನೆ ಮಾಡಿದಾಗ, ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದಾಗಿ ತಿಳಿಸಿದ್ದಾರೆ. ಕೋಟ ಪೊಲೀಸರು ಕೃತ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸದೆ ವಿಚಾರಣೆ ನೆಪದಲ್ಲಿ ತನ್ನನ್ನೇ ಪ್ರಶ್ನೆ ಮಾಡುತ್ತಿರುವುದಾಗಿ ಮಹಿಳೆ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Muslim women raped promsing of marriage in Mangalore, blackmail of video. A csse has been filed against Devdas Devadiga but udupi police have made on arrest so far.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm