ಬ್ರೇಕಿಂಗ್ ನ್ಯೂಸ್
01-02-24 10:35 pm Mangalore Correspondent ಕ್ರೈಂ
ಮಂಗಳೂರು, ಫೆ.1: ಮಂಗಳೂರಿನ ಮುಸ್ಲಿಂ ಮಹಿಳೆಯೊಬ್ಬರಿಗೆ ಬ್ರಹ್ಮಾವರ ಮೂಲದ ಯುವಕನೊಬ್ಬ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆರು ಲಕ್ಷ ರೂಪಾಯಿ ಹಣ ಲಪಟಾಯಿಸಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಮಾನೂರು ಗ್ರಾಮದ ದೇವದಾಸ್ ದೇವಾಡಿಗ(42) ಆರೋಪಿಯಾಗಿದ್ದು, ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ನಂಬಿಸಿ ಮದುವೆಯಾಗುತ್ತೇನೆಂದು ಹೇಳಿ 2021ರಿಂದ ಎರಡು ವರ್ಷಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಕ್ಕಿದ್ದ ಈ ವ್ಯಕ್ತಿ ತನ್ನ ಮೊಬೈಲಿನಲ್ಲಿ ಮಹಿಳೆಯ ಫೋಟೋ ಕ್ಲಿಕ್ಕಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಆನಂತರ, ಮಹಿಳೆಯ ಕೈಯಿಂದಲೇ ಆರು ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದಿದ್ದು, ಆನಂತರ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ.
ಹಣ ಪಡೆದಿದ್ದಲ್ಲದೆ, ದೈಹಿಕ ಸಂಪರ್ಕ ನಡೆಸಿ ಮೋಸ ಮಾಡಿರುವ ಯುವಕನ ಬಗ್ಗೆ ಮಹಿಳೆ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನಲ್ಲಿ ನೆಲೆಸಿದ್ದರೂ, ಮೂಲತಃ ಬ್ರಹ್ಮಾವರ ಮೂಲದವವರು. ಈ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯಲ್ಲಿದ್ದೇನೆಂದು ಹೇಳಿ ಯುವಕ ಮಹಿಳೆಗೆ ನೈತಿಕ ಬೆಂಬಲ ನೀಡುತ್ತೇನೆಂದು ಹೇಳಿ ಹತ್ತಿರವಾಗಿದ್ದು ಬಳಿಕ ಮೋಸ ಮಾಡಿದ್ದಾನೆ. ಈ ಬಗ್ಗೆ ನೊಂದಿರುವ ಮಹಿಳೆ ಉಡುಪಿ ಎಸ್ಪಿ ಅವರನ್ನು ಭೇಟಿಯಾಗಿ ಎರಡು ತಿಂಗಳ ಹಿಂದೆ ದೂರು ನೀಡಿದ್ದರು. ಕೋಟ ಠಾಣೆಗೆ ಪ್ರಕರಣ ವರ್ಗಾಯಿಸಿದ್ದ ಎಸ್ಪಿ ಆರೋಪಿ ಬಂಧನಕ್ಕೆ ಸೂಚಿಸಿದ್ದರು. ಆದರೆ, ಕೋಟ ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಯನ್ನು ಬಂಧಿಸಿಲ್ಲ. ಮಹಿಳೆ ಬಳಿಕ ಆರೋಪಿಯ ಬಂಧನದ ಬಗ್ಗೆ ಪ್ರಶ್ನೆ ಮಾಡಿದಾಗ, ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದಾಗಿ ತಿಳಿಸಿದ್ದಾರೆ. ಕೋಟ ಪೊಲೀಸರು ಕೃತ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸದೆ ವಿಚಾರಣೆ ನೆಪದಲ್ಲಿ ತನ್ನನ್ನೇ ಪ್ರಶ್ನೆ ಮಾಡುತ್ತಿರುವುದಾಗಿ ಮಹಿಳೆ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Muslim women raped promsing of marriage in Mangalore, blackmail of video. A csse has been filed against Devdas Devadiga but udupi police have made on arrest so far.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm