ಬ್ರೇಕಿಂಗ್ ನ್ಯೂಸ್
03-02-24 11:54 am HK News Desk ಕ್ರೈಂ
ಕಾಸರಗೋಡು, ಫೆ.3: ನಕಲಿ ವೀಸಾ, ಪಾಸ್ಪೋರ್ಟ್ ದಂಧೆಯಲ್ಲಿ ತೊಡಗಿಸಿದ್ದ ಜಾಲವೊಂದನ್ನು ಕಾಸರಗೋಡು ಜಿಲ್ಲೆಯ ಬೇಡಗಂ ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್, ಕಾಲೇಜು ಮತ್ತು ವೈದ್ಯರ ಲೆಟರ್ಹೆಡ್, ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ದಕ್ಷಿಣ ಕೊರಿಯಾದಲ್ಲಿ ಉದ್ಯೋಗಿಯಾಗಿದ್ದವರು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಂದ ಮೂರು ಪಾಸ್ಪೋರ್ಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ತ್ರಿಕರಿಪುರ ನಿವಾಸಿ ಎಂ.ಎ. ಅಹಮದ್ ಅಬ್ರಾರ್ (26) ಮತ್ತು ಎಂ.ಎ. ಸಾಬಿತ್ (25) ಮತ್ತು ಕಾಞಂಗಾಡು ಪುರಸಭೆಯ ಪಡನ್ನಕ್ಕಾಡ್ ಮಹಮ್ಮದ್ ಸಫ್ವಾನ್ (28) ಬಂಧಿತ ಆರೋಪಿಗಳಾಗಿದ್ದಾರೆ.
ನಕಲಿ ರಬ್ಬರ್ ಸೀಲ್ಗಳಲ್ಲಿ ವೈದ್ಯರು ಮತ್ತು ಬ್ಯಾಂಕ್ ವ್ಯವಸ್ಥಾಪಕರ ರಬ್ಬರ್ ಸ್ಟ್ಯಾಂಪ್ಗಳು ಸೇರಿವೆ. ವಶಪಡಿಸಿಕೊಂಡ ಲೆಟರ್ ಪ್ಯಾಡ್ಗಳಲ್ಲಿ ಪಟಣ್ಣ ಶರಾಫ್ ಕಾಲೇಜು, ಚಟ್ಟಂಚಾಲ್ ಎಂಐಸಿ ಕಾಲೇಜು ಮತ್ತು ಎಂಇಎಸ್ ಕಾಲೇಜುಗಳದ್ದಿವೆ. ಗುರುವಾರ ರಾತ್ರಿ ಬೇಡಗಂ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ನಕಲಿ ದಾಖಲೆ, ರಬ್ಬರ್ ಸೀಲು, ಲೆಟರ್ ಪ್ಯಾಡ್ ಗಳೊಂದಿಗೆ ಈ ಮೂವರ ತಂಡ ಸಿಕ್ಕಿಬಿದ್ದಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಲುವಾ, ಅಂಗಮಾಲಿ ಫೆಡರಲ್ ಬ್ಯಾಂಕ್, ತ್ರಿಕ್ಕರಿಪುರ ಸೌತ್ ಇಂಡಿಯನ್ ಬ್ಯಾಂಕ್ ಮೊದಲಾದ ಬ್ಯಾಂಕ್ಗಳ ವ್ಯವಸ್ಥಾಪಕರ ಹೆಸರಿನಲ್ಲಿರುವ ನಕಲಿ ರಬ್ಬರ್ ಸ್ಟ್ಯಾಂಪ್ ಗಳು ಸಿಕ್ಕಿವೆ. ಜೊತೆಗೆ ಬೆಂಗಳೂರು ಸೂಪರ್ ಸ್ಪೆಷಾಲಿಟಿ ಕೇಂದ್ರದ ಉದ್ಯೋಗ ದೃಢೀಕರಣ ಪತ್ರ ಹಾಗೂ ಎಂಇಎಸ್ ಕಾಲೇಜಿಗೆ ಸೇರಿದ ನಕಲಿ ನಿರಾಕ್ಷೇಪಣಾ ಪತ್ರವನ್ನೂ ವಶಪಡಿಸಲಾಗಿದೆ. ಆರೋಪಿಗಳು ಕೊರಿಯಾ ಇನ್ನಿತರ ದೇಶಗಳಿಗೆ ನಕಲಿ ವೀಸಾ ಮಾಡಿಕೊಡುವ ದಂಧೆಯಲ್ಲಿ ತೊಡಗಿಕೊಂಡಿದ್ದರು ಎನ್ನಲಾಗಿದೆ.
Three persons, including an employee of KIA in South Korea, were arrested with 37 fake seals, and letterheads of banks, colleges, and doctors, said Bedakam Police in Kasaragod. Three passports were also seized from them but they appear to be genuine, said Bedakam Sub-Inspector M Gangadharan.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm