ಬ್ರೇಕಿಂಗ್ ನ್ಯೂಸ್
03-02-24 11:54 am HK News Desk ಕ್ರೈಂ
ಕಾಸರಗೋಡು, ಫೆ.3: ನಕಲಿ ವೀಸಾ, ಪಾಸ್ಪೋರ್ಟ್ ದಂಧೆಯಲ್ಲಿ ತೊಡಗಿಸಿದ್ದ ಜಾಲವೊಂದನ್ನು ಕಾಸರಗೋಡು ಜಿಲ್ಲೆಯ ಬೇಡಗಂ ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್, ಕಾಲೇಜು ಮತ್ತು ವೈದ್ಯರ ಲೆಟರ್ಹೆಡ್, ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ದಕ್ಷಿಣ ಕೊರಿಯಾದಲ್ಲಿ ಉದ್ಯೋಗಿಯಾಗಿದ್ದವರು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಂದ ಮೂರು ಪಾಸ್ಪೋರ್ಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ತ್ರಿಕರಿಪುರ ನಿವಾಸಿ ಎಂ.ಎ. ಅಹಮದ್ ಅಬ್ರಾರ್ (26) ಮತ್ತು ಎಂ.ಎ. ಸಾಬಿತ್ (25) ಮತ್ತು ಕಾಞಂಗಾಡು ಪುರಸಭೆಯ ಪಡನ್ನಕ್ಕಾಡ್ ಮಹಮ್ಮದ್ ಸಫ್ವಾನ್ (28) ಬಂಧಿತ ಆರೋಪಿಗಳಾಗಿದ್ದಾರೆ.
ನಕಲಿ ರಬ್ಬರ್ ಸೀಲ್ಗಳಲ್ಲಿ ವೈದ್ಯರು ಮತ್ತು ಬ್ಯಾಂಕ್ ವ್ಯವಸ್ಥಾಪಕರ ರಬ್ಬರ್ ಸ್ಟ್ಯಾಂಪ್ಗಳು ಸೇರಿವೆ. ವಶಪಡಿಸಿಕೊಂಡ ಲೆಟರ್ ಪ್ಯಾಡ್ಗಳಲ್ಲಿ ಪಟಣ್ಣ ಶರಾಫ್ ಕಾಲೇಜು, ಚಟ್ಟಂಚಾಲ್ ಎಂಐಸಿ ಕಾಲೇಜು ಮತ್ತು ಎಂಇಎಸ್ ಕಾಲೇಜುಗಳದ್ದಿವೆ. ಗುರುವಾರ ರಾತ್ರಿ ಬೇಡಗಂ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ನಕಲಿ ದಾಖಲೆ, ರಬ್ಬರ್ ಸೀಲು, ಲೆಟರ್ ಪ್ಯಾಡ್ ಗಳೊಂದಿಗೆ ಈ ಮೂವರ ತಂಡ ಸಿಕ್ಕಿಬಿದ್ದಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಲುವಾ, ಅಂಗಮಾಲಿ ಫೆಡರಲ್ ಬ್ಯಾಂಕ್, ತ್ರಿಕ್ಕರಿಪುರ ಸೌತ್ ಇಂಡಿಯನ್ ಬ್ಯಾಂಕ್ ಮೊದಲಾದ ಬ್ಯಾಂಕ್ಗಳ ವ್ಯವಸ್ಥಾಪಕರ ಹೆಸರಿನಲ್ಲಿರುವ ನಕಲಿ ರಬ್ಬರ್ ಸ್ಟ್ಯಾಂಪ್ ಗಳು ಸಿಕ್ಕಿವೆ. ಜೊತೆಗೆ ಬೆಂಗಳೂರು ಸೂಪರ್ ಸ್ಪೆಷಾಲಿಟಿ ಕೇಂದ್ರದ ಉದ್ಯೋಗ ದೃಢೀಕರಣ ಪತ್ರ ಹಾಗೂ ಎಂಇಎಸ್ ಕಾಲೇಜಿಗೆ ಸೇರಿದ ನಕಲಿ ನಿರಾಕ್ಷೇಪಣಾ ಪತ್ರವನ್ನೂ ವಶಪಡಿಸಲಾಗಿದೆ. ಆರೋಪಿಗಳು ಕೊರಿಯಾ ಇನ್ನಿತರ ದೇಶಗಳಿಗೆ ನಕಲಿ ವೀಸಾ ಮಾಡಿಕೊಡುವ ದಂಧೆಯಲ್ಲಿ ತೊಡಗಿಕೊಂಡಿದ್ದರು ಎನ್ನಲಾಗಿದೆ.
Three persons, including an employee of KIA in South Korea, were arrested with 37 fake seals, and letterheads of banks, colleges, and doctors, said Bedakam Police in Kasaragod. Three passports were also seized from them but they appear to be genuine, said Bedakam Sub-Inspector M Gangadharan.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm