ಬ್ರೇಕಿಂಗ್ ನ್ಯೂಸ್
04-02-24 07:55 pm HK News Desk ಕ್ರೈಂ
ಹಾಸನ, ಫೆ.4: ಪಿಸ್ತೂಲ್ ಹಿಡಿದು ಒಂಟಿ ಮನೆಗೆ ನುಗ್ಗಿರುವ ಇಬ್ಬರು ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಮನೆಯಲ್ಲಿದ್ದ ಮಹಿಳೆ ಧರಿಸಿದ್ದ ಚಿನ್ನಾಭರಣಗಳನ್ನು ಬಲವಂತವಾಗಿ ಕಸಿದು ಎಸ್ಕೇಪ್ ಆಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಮುದಿಗೆರೆ ಕ್ರಾಸ್ನಲ್ಲಿ ನಡೆದಿದೆ.
ಗ್ರಾಮದ ರವಿ ಎಂಬವರು ಶನಿವಾರ ಸಂಜೆ ಮನೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮುಖಕ್ಕೆ ಕರವಸ್ತ್ರ ಹಾಕಿಕೊಂಡು ಇಬ್ಬರು ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ರವಿ ಪತ್ನಿ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮ ಇದ್ದು, ಅವರಿಗೆ ಪಿಸ್ತೂಲ್ ತೋರಿಸಿ ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ. ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿದ್ದಾರೆ. ಪಿಸ್ತೂಲ್ನಿಂದ ಫೈಯರ್ ಆಗುತ್ತಿದ್ದಂತೆ ಹೆದರಿದ ಶೃತಿ ತಮ್ಮ ಮಕ್ಕಳನ್ನು ರೂಂನಲ್ಲಿ ಕೂಡಿ ಹಾಕಿದ್ದಾರೆ. ಒಡವೆ ಕೊಡದಿದ್ದರೆ ಗುಂಡು ಹಾರಿಸುವುದಾಗಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದು, ಈ ವೇಳೆ ಶೃತಿ ಮೈಮೇಲಿದ್ದ ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ತೆಗೆದು ಕೊಟ್ಟಿದ್ದಾರೆ. ಬಳಿಕ ಅವರ ಮೊಬೈಲ್ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.


ಪಿಸ್ತೂಲ್ ಶಬ್ದ ಕೇಳುತ್ತಿದ್ದಂತೆ ರವಿ ಮನೆಗೆ ಓಡಿ ಬಂದಿದ್ದು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಫೈಯರ್ ಮಾಡಿ ಕಳ್ಳರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕಳ್ಳರು ಓಡಿ ಹೋಗುವ ದೃಶ್ಯ ಅಲ್ಲಿಯೇ ಸನಿಹ ಸಿಸಿಟಿಯಲ್ಲಿ ಸೆರೆಯಾಗಿದೆ. ಮನೆಗೆ ನುಗ್ಗಿದ ವೇಳೆ ಪಿಸ್ತೂಲ್ ತೋರಿಸಿ ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಹೆದರಿಸಿದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Hassan robbers threaten people in home rob gold jewellery by showing pistol.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm