ಬ್ರೇಕಿಂಗ್ ನ್ಯೂಸ್
04-02-24 07:55 pm HK News Desk ಕ್ರೈಂ
ಹಾಸನ, ಫೆ.4: ಪಿಸ್ತೂಲ್ ಹಿಡಿದು ಒಂಟಿ ಮನೆಗೆ ನುಗ್ಗಿರುವ ಇಬ್ಬರು ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಮನೆಯಲ್ಲಿದ್ದ ಮಹಿಳೆ ಧರಿಸಿದ್ದ ಚಿನ್ನಾಭರಣಗಳನ್ನು ಬಲವಂತವಾಗಿ ಕಸಿದು ಎಸ್ಕೇಪ್ ಆಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಮುದಿಗೆರೆ ಕ್ರಾಸ್ನಲ್ಲಿ ನಡೆದಿದೆ.
ಗ್ರಾಮದ ರವಿ ಎಂಬವರು ಶನಿವಾರ ಸಂಜೆ ಮನೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮುಖಕ್ಕೆ ಕರವಸ್ತ್ರ ಹಾಕಿಕೊಂಡು ಇಬ್ಬರು ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ರವಿ ಪತ್ನಿ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮ ಇದ್ದು, ಅವರಿಗೆ ಪಿಸ್ತೂಲ್ ತೋರಿಸಿ ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ. ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿದ್ದಾರೆ. ಪಿಸ್ತೂಲ್ನಿಂದ ಫೈಯರ್ ಆಗುತ್ತಿದ್ದಂತೆ ಹೆದರಿದ ಶೃತಿ ತಮ್ಮ ಮಕ್ಕಳನ್ನು ರೂಂನಲ್ಲಿ ಕೂಡಿ ಹಾಕಿದ್ದಾರೆ. ಒಡವೆ ಕೊಡದಿದ್ದರೆ ಗುಂಡು ಹಾರಿಸುವುದಾಗಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದು, ಈ ವೇಳೆ ಶೃತಿ ಮೈಮೇಲಿದ್ದ ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ತೆಗೆದು ಕೊಟ್ಟಿದ್ದಾರೆ. ಬಳಿಕ ಅವರ ಮೊಬೈಲ್ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.


ಪಿಸ್ತೂಲ್ ಶಬ್ದ ಕೇಳುತ್ತಿದ್ದಂತೆ ರವಿ ಮನೆಗೆ ಓಡಿ ಬಂದಿದ್ದು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಫೈಯರ್ ಮಾಡಿ ಕಳ್ಳರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕಳ್ಳರು ಓಡಿ ಹೋಗುವ ದೃಶ್ಯ ಅಲ್ಲಿಯೇ ಸನಿಹ ಸಿಸಿಟಿಯಲ್ಲಿ ಸೆರೆಯಾಗಿದೆ. ಮನೆಗೆ ನುಗ್ಗಿದ ವೇಳೆ ಪಿಸ್ತೂಲ್ ತೋರಿಸಿ ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಹೆದರಿಸಿದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Hassan robbers threaten people in home rob gold jewellery by showing pistol.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm