ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm