ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm