ಬ್ರೇಕಿಂಗ್ ನ್ಯೂಸ್
06-02-24 01:19 pm Bangalore Correspondent ಕ್ರೈಂ
ಬೆಂಗಳೂರು, ಫೆ.06: ಕ್ಷುಲ್ಲಕ ವಿಚಾರಕ್ಕೆ ತಾಯಿಯೊಂದಿಗೆ ಜಗಳವಾಡಿದ ಮಗ ರಾಡಿನಿಂದ ಹೊಡೆದು ಕೊಲೆ ಮಾಡಿದ್ದ ಘಟನೆ 3-4 ದಿನಗಳ ಹಿಂದೆ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಕೊಲೆಗೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಈ ಕೊಲೆಯಲ್ಲಿ ತಂದೆಯೂ ಶಾಮೀಲಾಗಿದ್ದ ಅಂಶ ಬಯಲಾಗಿದೆ. ಕೊಲೆಗೆ ಬಳಸಲಾಗಿದ್ದ ರಾಡ್ನಲ್ಲಿ 2 ರೀತಿಯ ಫಿಂಗರ್ ಪ್ರಿಂಟ್ ಪತ್ತೆಯಾಗಿದ್ದು ತಂದೆ-ಮಗ ಸೇರಿಕೊಂಡು ಮಹಿಳೆಯನ್ನು ಕೊಲೆ ಮಾಡಿರುವುದು ಬಯಲಾಗಿದೆ.
ಫೆಬ್ರವರಿ 2ರಂದು ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿತ್ತು. ಕ್ಷುಲ್ಲಕ ವಿಚಾರಕ್ಕೆ ತಾಯಿಯೊಂದಿಗೆ ಜಗಳವಾಡಿದ ಮಗ ರಾಡಿನಿಂದ ಹೊಡೆದು ಕೊಲೆ ಮಾಡಿದ್ದ. ಕೊಲೆಯ ತನಿಖೆ ನಡೆಸಿದ ಪೊಲೀಸರಿಗೆ ಮತ್ತೋರ್ವ ಕೊಲೆ ಆರೋಪಿ ಇರುವುದು ಬಯಲಾಗಿದೆ. ಕೊಲೆಗೆ ಬಳಸಲಾಗಿದ್ದ ರಾಡ್ ಮೇಲೆ 2 ರೀತಿಯ ಫಿಂಗರ್ ಪ್ರಿಂಟ್ಗಳು ಪತ್ತೆಯಾಗಿದ್ದವು. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದರು. ಆಗ ರಾಡ್ ನ ಎಫ್ಎಸ್ಎಲ್ಗೆ ಕಳುಹಿಸಿದಾಗ ರಾಡ್ ಮೇಲೆ ಇರುವುದು ಮಗ ಹಾಗೂ ತಂದೆಯ ಫಿಂಗರ್ ಪ್ರಿಂಟ್ ಎಂಬುವುದು ಬಯಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಕೊಲೆಯಾದ ನೇತ್ರಾಳ ಗಂಡ ಚಂದ್ರಪ್ಪನನ್ನು ಕೆ.ಆರ್. ಪುರಂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಕೊಲೆಯ ಸತ್ಯ ಬಯಲಾಗಿದೆ.
ವಿಚಾರಣೆ ಮಾಡಿದಾಗ ಆರೋಪಿ ಕೊಲೆಗೆ ನಿಖರ ಕಾರಣ ಬಾಯಿಬಿಟ್ಟಿದ್ದಾನೆ. ಕೊಲೆಯಾದ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ನಾವು ಊಟ ಇಲ್ಲದೆ ಉಪವಾಸ ಇರ್ತಾ ಇದ್ವಿ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಚಂದ್ರಪ್ಪ ಬಾಯ್ಬಿಟ್ಟಿದ್ದಾನೆ.

ಅಪ್ಪ ಜೈಲಿಗೆ ಹೋಗೋದು ಬೇಡ ಎಂದು ತಾನು ಜೈಲು ಸೇರಿದ ಮಗ ;
ಇನ್ನು ಅಪ್ಪ-ಮಗ ಸೇರಿಕೊಂಡು ತಾಯಿಯ ಕೊಲೆ ಮಾಡಿದ್ದಾರೆ. ಕೊಲೆ ಆದ ಬಳಿಕ ತಂದೆಯ ಬಗ್ಗೆ ಯೋಚನೆ ಮಾಡಿದ್ದ ಅಪ್ರಾಪ್ತ ಮಗ, ತಂದೆ ಜೈಲಿಗೆ ಹೋಗೋದು ಬೇಡ ಎಂದು ಕೊಲೆಯನ್ನ ತನ್ನ ಮೇಲೆಯೇ ಹಾಕಿಕೊಂಡಿದ್ದಾನೆ. ತಂದೆ ರಾಡ್ ನಿಂದ ಹೊಡೆದ ಬಳಿಕ ಮಗನೂ ಒಂದೆರಡು ಏಟು ಹೊಡೆದಿದ್ದಾನೆ. ಸತ್ತಿರೋದು ಕನ್ಫರ್ಮ್ ಆದ ಬಳಿಕ ಚಂದ್ರಪ್ಪ ಅಲ್ಲಿಂದ ಎಸ್ಕೇಪ್ ಆಗಿದ್ದ. ಫ್ಲಾನ್ ನಂತೆ ಮಗ ಕೆ.ಆರ್. ಪುರಂ ಠಾಣೆಗೆ ಹೋಗಿ ಸರೆಂಡರ್ ಆಗಿದ್ದಾನೆ.
ಜೈಲಿಗೆ ಹೋದ್ರೂ ಒಳ್ಳೆಯ ಎಜುಕೇಷನ್ ಸಿಗುತ್ತೆ ಅಂದಿದ್ದ ಮಗ ;
ಕೊಲೆ ಮಾಡಿದ ಬಳಿಕ ಅಪ್ಪ-ಮಗ ಇಬ್ಬರೂ ಕುಂತು ಪ್ಲಾನ್ ಮಾಡಿದ್ದಾರೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ. ನಾನು ಹೊರಗಡೆ ಬರೋ ಅಷ್ಟರಲ್ಲಿ ನೀನು ಚೆನ್ನಾಗಿ ಹಣ ಮಾಡಿಕೊಂಡಿರು ಎಂದು ಹೇಳಿ ತಂದೆಗೆ ಕೊಲೆಯಾದ ಸ್ಥಳದಿಂದ ಹೋಗಲು ಹೇಳಿ ಅಪ್ರಾಪ್ತ ಬಾಲಕನೇ ಠಾಣೆಗೆ ಬಂದು ಸರೆಂಡರ್ ಆಗಿದ್ದ. ಆದರೆ ಈಗ ಅಪ್ಪ ಕೂಡ ಜೈಲು ಸೇರಿದ್ದಾನೆ.
Mother killed by Son and husband over extramarital affair at k r param in Bangalore. After killing the mother son surrendered to the police saying that he killed her mother. But the fingerprints on the iron rod made it clear that even the husband was involved in the kind
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm