ಬ್ರೇಕಿಂಗ್ ನ್ಯೂಸ್
07-02-24 01:39 pm Mangalore Correspondent ಕ್ರೈಂ
ಪುತ್ತೂರು, ಫೆ.7: ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಉಪ್ಪಿನಂಗಡಿಯ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಶಾಖೆಯಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವ ಆರೋಪಿಗಳು ಆಲಂಕಾರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಶಾಖೆಯಲ್ಲೂ ವಂಚಿಸಿರುವುದು ಬೆಳಕಿಗೆ ಬಂದಿದೆ.
ಆರೋಪಿ ಸೆಬಾಸ್ಟಿಯನ್ ಜ.30ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಆಲಂಕಾರು ಶಾಖೆಗೆ ಬಂದು ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದ 30.200 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನ ಇರಿಸಿ 1.35 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಸಂಘದ ಆಲಂಕಾರು ಶಾಖಾ ಪ್ರಬಂಧಕಿ ರೇವತಿ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡ್ಯಾನಿಶ್ ಜ.27ರಂದು ನೆಲ್ಯಾಡಿಯ ಕಾಮಧೇನು ಮಹಳಾ ಸಹಕಾರಿ ಸಂಘದಲ್ಲಿ 30 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನವಿರಿಸಿ 1.40 ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಆರೋಪಿಗಳು ಜ.31ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಗೆ ಬಂದು 40 ಗ್ರಾಮ್ ತೂಕದ 5 ನಕಲಿ ಬಳೆಗಳನ್ನು ಅಡಮಾನ ಇರಿಸಿ 1.70 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದಾಗಿ ಶಾಖಾ ವ್ಯವಸ್ಥಾಪಕಿ ಕಮನ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಇನ್ನಷ್ಟು ಸಹಕಾರ ಸಂಘಗಳಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ವಂಚಿಸಿರುವ ಸಾಧ್ಯತೆಯಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ವಿಷಯ ಹೊರ ಬರುತ್ತಿದ್ದಂತೆ ಕೆಲವು ಸೊಸೈಟಿಯವರು ತಮ್ಮಲ್ಲಿಯೂ ವಂಚನೆ ಎಸಗಿರುವ ಬಗ್ಗೆ ದೂರು ಹಿಡಿದು ಮುಂದೆ ಬಂದಿದ್ದಾರೆ.
Kadaba Fake gold pledge to banks for laon, two from kerala arrested.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm